ಹುಬ್ಬಳ್ಳಿ; ಸಮೀಪದ ಗಾಮನಗಟ್ಟಿ ಗ್ರಾಮದ ಕರಿಯಮ್ಮದೇವಿಯ ಜಾತ್ರಾಮಹೋತ್ಸವ ಕಾರ್ಯಕ್ರಮ ಮೇ 21ರಿಂದ 26ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕರಿಯಮ್ಮದೇವಿ ದೇವಸ್ಥಾನ ಟ್ರಸ್ಟ್ ಸದಸ್ಯ ಮಂಜುನಾಥ ಹಾರೋಗೇರಿ ಹೇಳಿದರು.
ಹುಬ್ಬಳ್ಳಿ: ಡಾ. ಅಗರ್ವಾಲ್ಸ್ ಐ ಹಾಸ್ಪಿಟಲ್ನಿಂದ ಅಕ್ಷಯ ಪಾತ್ರ ಫೌಂಡೇಶನ್ಗೆ ವಾಹನ ದೇಣಿಗೆ!
ಅವರು ನಗರದಲ್ಲಿಂದು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾತ್ರೆಯ ಹಿನ್ನೆಲೆಯಲ್ಲಿ ಈಗಾಗಲೇ ಕಳೆದ ಮೇ 13ರಿಂದ 21ರ ವರೆಗೆ ಪ್ರತಿದಿನ ಸಂಜೆ 7ರಿಂದ 8 ಗಂಟೆಯ ವರೆಗೆ ಅನ್ನದಾನೀಶ್ವರ ಮಠದ ಅಭಿನವ ಮೃತ್ಯುಂಜಯ ಶ್ರೀಗಳಿಂದ ಪ್ರವಚನ ಕಾರ್ಯಕ್ರಮ ನಡೆಯುತ್ತಿದೆ. ಮೇ 21ರಂದು ಬೆಳಗ್ಗೆ ದೇವಿಗೆ ಅಲಂಕಾರ ಕಾರ್ಯಕ್ರಮ, ಮಧ್ಯಾಹ್ನ 12ಕ್ಕೆ 51 ಜೋಡಿಗಳ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಲಿದೆ. ಅಂದು ಬೆಳಗ್ಗೆ ಡೊಳ್ಳು. ಝಾಂಜಮೇಳ ಸೇರಿದಂತೆ ವಿವಿಧ ವಾದ್ಯಮೇಳದೊಂದಿಗೆ ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ ಜರುಗಲಿದೆ. ಸಂಜೆ ಕರಿಯಮ್ಮದೇವಿ ಜಾತ್ರಾಮಹೋತ್ಸವ ಮತ್ತು ಉಡಿತುಂಬುವ ಕಾರ್ಯಕ್ರಮ ಜರುಗಲಿದೆ.
ಮೇ 22ರಿಂದ 26ರ ವರೆಗೆ ಬಯಲು ಕುಸ್ತಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆ ಸೇರಿದಂತೆ ರಾಜ್ಯದ ಪ್ರಸಿದ್ಧ ಕುಸ್ತಿಪಟುಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅನಿಲಕುಮಾರ ಮಳಗಿ ಸೇರಿದಂತೆ ಹಲವರಿದ್ದರು.