ಉತ್ತರ ಕನ್ನಡ : ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಮಾತನಾಡಿದ್ದ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಪ್ರತಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಮಾಜಿ ಸಚಿವೆ ಡಾ ಅಂಜಲಿ ನಿಂಬಾಳ್ಕರ್ ಸ್ವಲ್ಪ ಕಾರವಾಗಿಯೇ ಪ್ರತಿಕ್ರಿಯಿಸಿದ್ದು, ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲು ಸಹಾಯ ಮಾಡಲ್ಲ ಎಂದು ಕಿಡಿಕಾರಿದ್ದಾರೆ.
Monsoon: ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ಈ ತರಕಾರಿಗಳನ್ನು ತಿನ್ನಬೇಡಿ..!
ರಶ್ಮಿಕಾ ಮಂದಣ್ಣ ವಿಡಿಯೋಗೆ ತಮ್ಮ ಅಧಿಕೃತ ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸಿರುವ ಅಂಜಲಿ ನಿಂಬಾಳ್ಕರ್, ಬುಲೆಟ್ ರೈಲಿನ ಬಗ್ಗೆ ನಿಮಗೆ ಏನಾದರೂ ಹೇಳಲು ಇದೆಯೇ? ಎಂದು ಪ್ರಶ್ನಿಸಿದ್ದಾರೆ.
https://x.com/DrAnjaliTai/status/1791336699009884500?ref_src=twsrc%5Etfw%7Ctwcamp%5Etweetembed%7Ctwterm%5E1791336699009884500%7Ctwgr%5Ee2658be0822135f1e69992d8bebd2c66083ec5db%7Ctwcon%5Es1_&ref_url=https%3A%2F%2Fvijaykarnataka.com%2Fnews%2Fkarnataka%2Fcongress-leader-anjali-nimbalkar-slams-actress-rashmika-mandanna-over-pro-bjp-video%2Farticleshow%2F110205639.cms
ಮುಂಬೈ ಮತ್ತು ಅಹಮದಾಬಾದ್ ಬುಲೆಟ್ ರೈಲು : ಅದೊಂದು ನಿರ್ಮಾಣದ ದುರಂತ, ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲು ಸಹಾಯ ಮಾಡಲ್ಲ ಎಂದು ನೇರಾ ನೇರ ವಾಗ್ದಾಳಿ ನಡೆಸಿದ್ದಾರೆ.