ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ನಾಲ್ಕೈದು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವೆಡೆ ಯೆಲ್ಲೊಅಲರ್ಟ್, ಆರೆಂಜ್ ಅಲರ್ಟ್ ಕೂಡ ಘೋಷಿಸಲಾಗಿದೆ.
House Fly: ಮನೆಯಲ್ಲಿ ನೊಣಗಳ ಕಾಟದಿಂದ ಬೇಸತ್ತಿದ್ದೀರಾ..? ಈ ಟ್ರಿಕ್ ಬಳಸಿ ಅವುಗಳನ್ನು ಓಡಿಸಿ!
ಸುಳಿಗಾಳಿ ಪರಿಣಾಮದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ. ಮೇ 19 ಹಾಗೂ 20ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ನ ಮುನ್ಸೂಚನೆ ನೀಡಲಾಗಿದೆ.
ಎಲ್ಲೆಲ್ಲಿ ಯಾವಾಗ ಮಳೆ?
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ, ಮೇ 19 ರಂದು ಉತ್ತರ ಕನ್ನಡ, ಮೇ 20ಕ್ಕೆ ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ತುಮಕೂರು, ಮೇ 21ಕ್ಕೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ಘೋಷಿಸಲಾಗಿದೆ.
ಆರೇಂಜ್ ಅಲರ್ಟ್ ಎಚ್ಚರಿಕೆ
ಮೇ 21 ಹಾಗೂ 22 ಕ್ಕೆ ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇನ್ನು ಈ ವರ್ಷದಲ್ಲಿ ಮೊದಲ ಬಾರಿ ಆರೆಂಜ್ ಅಲರ್ಟ್ ನೀಡಲಾಗಿದೆ.