ಬೆಂಗಳೂರು :- ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
Live score: ಬೆಂಗಳೂರಿನಲ್ಲಿ ಮಳೆ ಆರಂಭ.. RCB V/s CSK ಪಂದ್ಯಕ್ಕೆ ಅಡಚಣೆ..!
ಈ ಸಂಬಂಧ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣದಲ್ಲಿ ಬಿಜೆಪಿಗೆ ಯಾವುದೇ ಗೊಂದಲವಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಅದರಲ್ಲಿ ಎರಡು ಮಾತಿಲ್ಲ, ಅದರೆ ಪೆನ್ ಡ್ರೈವ್ ಗಳನ್ನು ಹಾದಿ ಬೀದಿಯಲ್ಲಿ ಬಿಸಾಡಿದವರನ್ನು ಶಿಕ್ಷೆಗೊಳಡಿಸಬೇಕು, ಇದರ ಹಿಂದೆ ಯಾಱರಿದ್ದಾರೆ ಅನ್ನೋದು ತನಿಖೆಯಾಗಬೇಕು ಎಂದು ಹೇಳಿದರು.
ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಹೆಸರು ಕೇಳಿಬರುತ್ತಿರುವುದನ್ನು ಅವರ ಗಮನಕ್ಕೆ ತಂದಾಗ, ಘಟಾನುಘಟಿಗಳ ಹೆಸರು ಕೇಳಿಬರುತ್ತಿರುವುದು ನಿಜ, ಅದೇ ಕಾರಣಕ್ಕೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಬಿಜೆಪಿ ಆಗ್ರಹ ಮಾಡುತ್ತಿದೆ, ಅನ್ಯಾಯಕ್ಕೊಳಗಾಗಿರುವ ಮಹಿಳೆಯರಿಗೆ ನ್ಯಾಯ ಕೊಡಿಸುವುದು ಎಸ್ಐಟಿಯಿಂದ ಸಾಧ್ಯವಿಲ್ಲ, ಸಿಬಿಐ ತನಿಖೆ ನಡೆಸಿದರೆ ಅವರಿಗೆ ನ್ಯಾಯ ಸಿಗುವ ಜೊತೆಗೆ ಮುಚ್ಚಿಹೋಗುವ ಅಪಾಯದಲ್ಲಿರುವ ಎಲ್ಲ ಸಂಗತಿಗಳು ಹೊರಬೀಳಲಿವೆ ಎಂದು ವಿಜಯೇಂದ್ರ ಹೇಳಿದರು.