ಬೆಂಗಳೂರು :- ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ವಾರೆಂಟ್ ಹೊರಡಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಪ್ರಜ್ವಲ್ ವಿರುದ್ಧ ವಾರೆಂಟ್ ಹೊರಡಿಸಿದ್ದು, ವಾರೆಂಟ್ ಸಹಾಯದಿಂದ ರೆಡ್ ಕಾರ್ನರ್ ನೋಟಿಸ್ ಪ್ರಕ್ರಿಯೆ ನಡೆಸಲಿದೆ.
ಎಸ್ಐಟಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಬಾರದೇ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ವಾರೆಂಟ್ ಹೊರಡಿಸುವಂತೆ ಎಸ್ಐಟಿ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ್ಯಾಯಮೂರ್ತಿ ಜೆ. ಪ್ರೀತ್, ಈ ಆದೇಶ ಹೊರಡಿಸಿದ್ದಾರೆ.
ಎಸ್ಐಟಿ ನೋಟಿಸ್ ಕೊಟ್ಟರೂ ಪ್ರಜ್ವಲ್ ರೇವಣ್ಣ ಕ್ಯಾರೇ ಎಂದಿರಲಿಲ್ಲ. ಮೊದಲ ನೋಟಿಸ್ಗೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೇಳಿದ್ದರು. ಆದರೆ 22 ದಿನಗಳಾದರೂ ಪ್ರಜ್ವಲ್ ರೇವಣ್ಣ ವಿದೇಶದಿಂದ ವಾಪಸ್ಸಾಗಿಲ್ಲ, ವಿಚಾರಣೆಗೂ ಹಾಜರಾಗಿಲ್ಲ. ಇದೀಗ ಕೋರ್ಟ್ ವಾರೆಂಟ್ ಹೊರಡಿಸಿರೋದ್ರಿಂದ ಈ ಬಾರಿಯಾದ್ರೂ ಪ್ರಜ್ವಲ್ ವಿಚಾರಣೆಗೆ ಬರ್ತಾರಾ ಎಂಬ ಪ್ರಶ್ನೆ ಮೂಡಿದೆ