ಬೆಂಗಳೂರು:- ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಇಂದಿಗೆ ಒಂದು ವರ್ಷ ಪೂರ್ಣವಾಗಿದೆ. ಈ ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಹಲವು ಸವಾಲುಗಳನ್ನು ಎದುರಿಸಿತು. ಹಾಗೆ ಚುನಾವಣೆ ಪೂರ್ವದಲ್ಲಿ ತಾನು ಘೋಷಿಸಿದ್ದ ಹಲವು ಗ್ಯಾರೆಂಟಿಗಳನ್ನು ಜಾರಿ ಮಾಡಿದೆ. ಒಂದು ವರ್ಷ ಪೂರೈಸಿದ ಸಂತಸದಲ್ಲಿರುವ ಸರ್ಕಾರ ಎದುರಿಸಿದ ಸವಾಲುಗಳೇನು? ಮಾಡಿದ ಸಾಧನೆಗಳೇನು? ಪ್ರತಿಪಕ್ಷಗಳಿಗೆ ಕೊಟ್ಟ ಚಾಟಿ ಏಟಿನ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರಿನಲ್ಲಿ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ರಾ ಹೇಮಾ..!? ನಟಿ ಕೊಟ್ಟ ಸ್ಪಷ್ಟನೆ ಹೀಗಿದೆ!
ಈ ಒಂದು ವರ್ಷದ ಅವಧಿಯಲ್ಲಿ ಹಲವು ಸವಾಲುವಳನ್ನು ಎದರಿಸಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಐದು ಗ್ಯಾರಂಟಿ ಯೋಜನೆಗಳೇ ಮೂಲಬೇರು. ಗ್ಯಾರಂಟಿ ಭರವಸೆಗಳನ್ನು ನೀಡಿಯೇ ಕಾಂಗ್ರೆಸ್ ಅಧಿಕಾರಿಕ್ಕೆ ಬಂತು. ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಕ್ಯಾಬಿನೆಟ್ನಲ್ಲಿಯೇ ಐದು ಗ್ಯಾರಂಟಿಗಳಿಗೆ ಅನುಮೋದನೆ ನೀಡಿತು.
ಶಕ್ತಿ ಯೋಜನೆ, ಅನ್ನ ಭಾಗ್ಯದ ಹೆಚ್ಚುವರಿ ಹಣ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಮೂಲಕ ಮಹಿಳೆಯರ ಮತ್ತು ಯುವಕರ ಮನಗೆದ್ದ ಸರ್ಕಾರ ಈ ಗ್ಯಾರಂಟಿ ಜಾರಿಗೆ ಹಣ ಸರಿದೂಗಿಸಲು ಹಲವು ಕಸರತ್ತು ಮಾಡಿತು. ಗ್ಯಾರಂಟಿ ಯೋಜನೆಯಿಂದ ಹಲವು ಕ್ಷೇತ್ರಗಳಿಗೆ ಅನುದಾನ ಕಡಿತವಾಗಿದೆ ಎಂದು ಕೆಲ ಸ್ವಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.
ಅಸಮಾಧಾನ ನಡುವೆಯೂ ಸರ್ಕಾರ ಗ್ಯಾರಂಟಿ ಅನುಷ್ಟಾನ ಕೈ ಬಿಡದೇ ಜಾರಿ ಮಾಡಿಯೇ ಬಿಟ್ಟಿತು. ನುಡಿದಂತೆ ನಡೆದಿದ್ದೇವೆ ಎಲ್ಲ ಗ್ಯಾರಂಟಿ ಜಾರಿ ಮಾಡಿದ್ದೇವೆ ಅನ್ನೋದು ಸರ್ಕಾರದ ಹೆಗ್ಗಳಿಕೆಯಾಗಿದೆ. ಲೋಕಸಭೆ ಚುನಾವಣೆಯಲ್ಲೂ ಸಹ ಇದೇ ಗ್ಯಾರಂಟಿ ಕೈ ಹಿಡಿದಿದೆ ಎಂಬ ವಿಶ್ವಾಸ ಕಾಂಗ್ರೆಸ್ ಸರ್ಕಾರಕ್ಕೆ ಇದೆ.
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ಉಗ್ರಾಣದಲ್ಲಿ ಹೆಚ್ಚುವರಿ ಅಕ್ಕಿ ಇರಲಿಲ್ಲ. (ಐದು ಕೆಜಿ ಅಕ್ಕಿ ಮೊದಲೆ ನೀಡಲಾಗುತ್ತಿದ್ದು, ಐದು ಕೆಜಿ ಹೆಚ್ಚುವರಿ ನೀಡುವುದು) ಇದರಿಂದ ಹೆಚ್ಚುವರಿ ಅಕ್ಕಿ ಹೊಂದಿಸಲು ಕಷ್ಟವಾಯಿತು. ಹೀಗಾಗಿ ರಾಜ್ಯ ಸರ್ಕಾರ ಅಕ್ಕಿಗಾಗಿ ಕೇಂದ್ರ ಸರ್ಕಾರದ ಮೊರೆ ಹೋಯಿತು. ಆದರೆ ಕೇಂದ್ರ ಸರ್ಕಾರ ನೀಡಲು ನಿರಾಕರಿಸಿತು. ಬಳಿಕ ವಿವಿಧ ರಾಜ್ಯದ ಸಿಎಂಗಳೊಂದಿಗೆ ಮಾತನಾಡಿದರೂ, ಏನು ಪ್ರಯೋಜನವಾಗಲಿಲ್ಲ. ಬಳಿಕ ಐದು ಕೆಜಿ ಅಕ್ಕಿ ಬದಲಾಗಿ, ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಲು ಆರಂಭಿಸಿದೆ.
ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದು ಮೂರೇ ತಿಂಗಳಲ್ಲಿ ರಾಜ್ಯದಲ್ಲಿ ಬರಗಾಲ ಆವರಿಸಿತು. ಸಮರ್ಪಕವಾಗಿ ಮಳೆಯಾಗದೆ ಕುಡಿಯಲು ಸಹಿತ ನೀರಿಲ್ಲದಂತ ಪರಿಸ್ಥಿತಿ ಎದುರಾಯಿತು. ರಾಜಧಾನಿ ಬೆಂಗಳೂರಿನಲ್ಲೇ ಕುಡಿಯುವ ನೀರಿಗಾಗಿ ಪರದಾಡುವಂತಾಯಿತು. ಮಳೆ ಇಲ್ಲದೆ ಜಲಾಶಯಗಳು ಬತ್ತಲು ಆರಂಭಿಸಿದವು. ನೀರಿಲ್ಲದೆ ಸಂಕಷ್ಟ ಪಡುತ್ತಿರುವ ಮಧ್ಯೆಯೇ ಕೆಆರ್ಎಸ್ನಿಂದ ತಮಿಳುನಾಡಿಗೆ ನೀರು ಬಿಡಬೇಕೆಂಬ ಆದೇಶ ಸಹಜವಾಗಿ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಳ್ಳುವಂತೆ ಮಾಡಿತು.
ಬರಗಾಲದ ಹಿನ್ನೆಲೆಯಲ್ಲಿ ಕೇಂದ್ರದ ಜೊತೆಗಿನ ಸಂಘರ್ಷ ಮತ್ತೆ ಶುರುವಾಯಿತು. ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸಂಘರ್ಷಕ್ಕೆ ಇಳಿಯಿತು. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಅಂತ ರಾಜ್ಯ ಸರ್ಕಾರ ಹೊರಟ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಇಡೀ ಸಂಪುಟವನ್ನೇ ದೆಹಲಿ ತನಕ ಕರೆದುಕೊಂಡು ಹೋಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು