ಬೆಂಗಳೂರು :- ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒನ್ನೊಂದೇ ವಿಚಾರಗಳು ಬೆಳಕಿಗೆ ಬರುತ್ತಿದ್ದು, ಸಾಕಷ್ಟು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.
ಹೆಲಿಕಾಪ್ಟರ್ ಪತನಗೊಂಡು ಇಬ್ರಾಹಿಂ ರೈಸಿ ನಿಧನ: ಇರಾನ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್
ಶಿವರಾಮೇಗೌಡ ವ ಹಾಗೂ ವಕೀಲ ದೇವರಾಜೇಗೌಡ ಅವರದ್ದು ಎನ್ನಲಾದ ಆಡಿಯೋ ರಿಲೀಸ್ ಬಳಿಕ ಜೆಡಿಎಸ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದೆ
ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
CDಶಿವಕುಮಾರ್ ಗ್ಯಾಂಗಿನ ಸಂಚುಗಳು ಹೀಗಿವೆ ಎಂದಿರುವ ಜೆಡಿಎಸ್, ಡಿ.ಕೆ.ಶಿವಕುಮಾರ್ ಹೂಡಿರುವ ಸಂಚುಗಳನ್ನು ಪಟ್ಟಿ ಮಾಡಿದೆ.
•ಸಂಚು ನಂ.1: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು.
•ಸಂಚು ನಂ.2: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು
ಮಾಡುವುದು.
•ಸಂಚು ನಂ.3: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು.
•ಸಂಚು ನಂ.4: ಹೆಚ್.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು.
ಹೀಗೆ ಆರೋಪಿಸಿ ಜೆಡಿಎಸ್ ಟ್ವೀಟ್ ಮಾಡಿದೆ.