ಲೋಕಸಭಾ ಚುನಾವಣೆಯ ಐದು ಹಂತಗಳು ಮುಕ್ತಾಯಗೊಂಡಿವೆ. ಕೊನೆಯ ಎರಡು ಹಂತ ಮತದಾನ ಮೇ 25 ಮತ್ತು ಜೂನ್ 1 ರಂದು ನಡೆಯಲಿದೆ. ಹೀಗಾಗಿ ರಾಷ್ಟ್ರೀಯ ಬಿಜೆಪಿ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ.
ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಂತಹ ಹಿರಿಯ ನಾಯಕರು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಮೋದಿ ಇಂದು ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬಿಹಾರದ ಪೂರ್ವ ಚಂಪಾರಣ್ನಲ್ಲಿ ಬೆಳಗ್ಗೆ 11 ಗಂಟೆಯಿಂದ ಪ್ರಧಾನಿ ಮೋದಿಯವರ ಮೊದಲ ಸಾರ್ವಜನಿಕ ಸಭೆ ನಡೆಯಲಿದೆ.
ಬಿಹಾರದ ಮಹಾರಾಜ್ಗಂಜ್ನಲ್ಲಿ ಮಧ್ಯಾಹ್ನ 12.30ರ ಸುಮಾರಿಗೆ ಪ್ರಧಾನಿ ಚುನಾವಣಾ ರ್ಯಾಲಿಯನ್ನು ನಡೆಸಲಿದ್ದಾರೆ. ಬಿಹಾರದಲ್ಲಿ ಎರಡು ರ್ಯಾಲಿಗಳ ನಂತರ ಪ್ರಧಾನಿ ಮೋದಿ ಉತ್ತರ ಪ್ರದೇಶಕ್ಕೆ ತೆರಳಲಿದ್ದಾರೆ. ಬಿಜೆಪಿ ಬಿಡುಗಡೆ ಮಾಡಿದ ಕಾರ್ಯಕ್ರಮಗಳ ಪ್ರಕಾರ, ಪ್ರಧಾನಿ ಮೋದಿ ಮಧ್ಯಾಹ್ನ 3.45 ಕ್ಕೆ ಪ್ರಯಾಗರಾಜ್ನಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಇದಾದ ಬಳಿಕ ಪ್ರಧಾನಿ ಮೋದಿ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ತೆರಳಲಿದ್ದಾರೆ.
ವಾರಾಣಸಿಯಲ್ಲಿ ಸಂಜೆ 5.30ರ ಸುಮಾರಿಗೆ ನಾರಿ ಶಕ್ತಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಧಾನಿ ಮೋದಿ ಹೊರತುಪಡಿಸಿ, ಗೃಹ ಸಚಿವ ಅಮಿತ್ ಶಾ ಒಡಿಶಾದಲ್ಲಿ ಬಿಜೆಪಿಯ ಪ್ರಚಾರದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.
ಪಕ್ಷವು ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಅಮಿತ್ ಶಾ ಮಂಗಳವಾರ ಒಡಿಶಾದಲ್ಲಿ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಬಲ್ಪುರ ಲೋಕಸಭಾ ಕ್ಷೇತ್ರದಿಂದ ಶಾ ಅವರ ರಾಜಕೀಯ ಕಾರ್ಯಕ್ರಮಗಳು ಆರಂಭವಾಗಲಿವೆ. ಇಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಆಯೋಜಿಸಲಾಗಿರುವ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ
ಇನ್ನೂ ಬಿಜೆಪಿಯ ಬಿರುಸಿನ ಚುನಾವಣಾ ಪ್ರಚಾರದ ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಕೂಡ ಮತದಾರರ ಓಲೈಕೆಯಲ್ಲಿ ನಿರತವಾಗಿದೆ