ಕೊಲ್ಕತ್ತಾ: ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿದ ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ನಡೆಗೆ ಕೊಲ್ಕತ್ತಾ ಹೈಕೋರ್ಟ್ ತೀವ್ರ ಅಸಮಧಾನ ವ್ಯಕ್ತಪಡಿಸಿದೆ. ಮುಂದಿನ ಆದೇಶವರೆಗೂ ಟಿಎಂಸಿ ಸರ್ಕಾರದ ವಿರುದ್ಧ ಯಾವುದೇ ಅವಹೇಳನಕಾರಿ ಜಾಹೀರಾತು ಪ್ರಕಟಿಸದಂತೆ ಬಿಜೆಪಿಗೆ (BJP) ಕೋರ್ಟ್ ನಿರ್ಬಂಧ ಹೇರಿದೆ.
ಮತದಾನದ ಹಿಂದಿನ ದಿನ ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿ ತೃಣಮೂಲ ಕಾಂಗ್ರೆಸ್ (TMC) ಸರ್ಕಾರದ ವಿರುದ್ಧ ಬಿಜೆಪಿ ಅವಹೇನಕಾರಿ ಜಾಹೀರಾತು (BJP Advertisement) ಪ್ರಕಟಿಸಿತ್ತು. ಆದರೂ ಬಿಜೆಪಿ ವಿರುದ್ಧ ಕೈಗೊಳ್ಳದ ಚುನಾವಣಾ ಆಯೋಗದ (ECI) ವಿರುದ್ಧ ಟಿಎಂಸಿ, ಹೈಕೋರ್ಟ್ ಮೊರೆ ಹೋಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಬ್ಯಸಾಚಿ ಭಟ್ಟಚಾರ್ಯ ನೇತೃತ್ವದ ಏಕಸದಸ್ಯ ಪೀಠವು ಟಿಎಂಸಿ ಸಲ್ಲಿಸಿದ ದೂರುಗಳನ್ನು ಪರಿಹರಿಸಲು ಆಯೋಗ ತೀವ್ರವಾಗಿ ವಿಫಲವಾಗಿದೆ ಎಂದು ದೂರಿತು.
Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ
ಟಿಎಂಸಿಯ ದೂರುಗಳನ್ನು ಪರಿಹರಿಸಲು ಚುನಾವಣಾ ಆಯೋಗ ಸಂಪೂರ್ಣವಾಗಿ ವಿಫಲವಾಗಿದೆ. ಚುನಾವಣೆಗಳು ಮುಗಿದ ನಂತರದ ದೂರುಗಳ ಪರಿಹಾರ ಕೋರಿ ನ್ಯಾಯಲಯಕ್ಕೆ ಬರುತ್ತಿವೆ ಎಂದು ಆಶ್ವರ್ಯ ವ್ಯಕ್ತಪಡಿಸಿದರು. ಚುನಾವಣೆ ಮತ್ತು ಮತದಾನದ ಹಿಂದಿನ ದಿನ ಬಿಜೆಪಿಯ ಜಾಹೀರಾತುಗಳು ಮಾದರಿ ನೀತಿ ಸಂಹಿತೆ, ಟಿಎಂಸಿಯ ಹಕ್ಕುಗಳು ಮತ್ತು ನಾಗರಿಕರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು.
ಟಿಎಂಸಿ ವಿರುದ್ಧ ಮಾಡಲಾದ ಆರೋಪಗಳು ಮತ್ತು ಪ್ರಕಟಣೆಗಳು ಸಂಪೂರ್ಣ ಅವಹೇಳನಕಾರಿ ಮತ್ತು ಪ್ರತಿಸ್ಪರ್ಧಿಗಳನ್ನು ಅವಮಾನಿಸುವ ಮತ್ತು ವೈಯಕ್ತಿಕವಾಗಿ ದಾಳಿ ನಡೆಸುವ ಉದ್ದೇಶವನ್ನು ಹೊಂದಿವೆ. ಆದ್ದರಿಂದ, ಮುಕ್ತ, ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಗಾಗಿ, ಮುಂದಿನ ಆದೇಶದವರೆಗೆ ಅಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ಬಿಜೆಪಿಗೆ ನಿರ್ಬಂಧ ವಿಧಿಸಬೇಕು ಎಂದು ನ್ಯಾಯಾಲಯ ಹೇಳಿದೆ.