ಬೆಂಗಳೂರು: ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಚಿವರಿಗೆ ಔತಣಕೂಟ ಆಯೋಜನೆ ಮಾಡಿದ್ದಾರೆ. ಸಂಸದ ಡಿಕೆ ಸುರೇಶ್ ನಿವಾಸದಲ್ಲಿ ಇಂದು ಸಂಜೆ 7 ಗಂಟೆಗೆ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದು, ಸಂಜೆ 7 ಗಂಟೆಗೆ ನಡೆಯುವ ಭೋಜನಕೂಟದಲ್ಲಿ ಊಟದ ಜೊತೆ ಬಹಳಷ್ಟು ರಾಜಕೀಯ ಚರ್ಚೆ ನಡೆಯಲಿದೆ ಎನ್ನಲಾಗಿದೆ.
NBCC Recruitment: ಪರೀಕ್ಷೆಯಿಲ್ಲದೆ NBCC ಕಾರ್ಪೊರೇಷನ್’ನಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಕೆಪಿಸಿಸಿ ಅಧ್ಯಕ್ಷದ ಬದಲಾವಣೆ ಕುರಿತು ಸುಳಿವು ನೀಡಿದ್ದ ಡಿಕೆಶಿ, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಮುಂದುವರೆಯುತ್ತಾರಾ, ಕೆಳಗಿಳೀತಾರಾ ಎನ್ನುವ ಚರ್ಚೆ ಜೋರಾಗಿದೆ. ಇದರ ಜೊತೆಗೆ ಸಿಎಂ ಗಾದಿ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರ ಹಂಚಿಕೆ ಬಗ್ಗೆ ಮಾತುಕತೆ ನಡೆಸುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ ಸಚಿವರನ್ನ ವಿಶ್ವಾಸಕ್ಕೆ ಪಡೆಯಲು ಮುಂದಾಗಿರುವ ಡಿಸಿಎಂ ಡಿಕೆಶಿ ಔತಣಕೂಟ ಆಯೋಜನೆ ಮಾಡಿದ್ದಾರೆ ಎನ್ನಲಾಗಿದೆ.
ಡಿನ್ನರ್ ಪಾರ್ಟಿ ಡಿಸ್ಕಸನ್ ಟಾಫಿಕ್ಸ್ ಏನೇನು…?
- ಶಿಕ್ಷಕರ, ಪದವೀಧರ ಕ್ಷೇತ್ರ ಚುನಾವಣೆ ಗೆಲುವಿಗಾಗಿ ತಂತ್ರಗಾರಿಕೆ..
- ಬಿಬಿಎಂಪಿ ಸೇರಿದಂತೆ ಸ್ಥಳೀಯ ಚುನಾವಣೆ ತಯಾರಿ ಕುರಿತು ಚರ್ಚೆ
- ಲೋಕಸಭೆ ಚುನಾವಣೆ ರೀವ್ಯೂ ಮಾತುಕತೆ
- ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಒಂದಷ್ಟು ಮಾತುಕತೆ ಸಾಧ್ಯತೆ