ಬೆಳಗಾವಿ-ಬಾಗಲಕೋಟೆ ಜಿಲ್ಲೆ ಬೆಸುಗೆ ಮಾಡುವಲ್ಲಿ ಮಹತ್ತರ ಯೋಜನೆಯಾಗಿರುವ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಜಾಕವೆಲ್ನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಮಹಿಷವಾಡಗಿ ಬ್ಯಾರೇಜ್ ಕಾಮಗಾರಿ ನಿಧಾನಗತಿಯಲ್ಲಿ ಸಾಗ್ತಾ ಇತ್ತು ಮತ್ತು ಸುಮಾರು ಹತ್ತು ವರ್ಷಗಳಿಂದ ನಿರಂತರವಾಗಿ ಕಾಮಗಾರಿ ನಡೀತಾನೆ ಇದೆ.
ಆದರೆ ಇಲ್ಲಿವರೆಗೂ ಪೂರ್ಣಗೊಂಡಿಲ್ಲ ಮತ್ತು ಅಸ್ತಿ ಪಂಜರದಂತೆ ಬ್ಯಾರೇಜ್ ಅನಾಥವಾಗಿ ನಿಂತಿರುವದು ಸಾರ್ವಜನಿಕರಿಗೆ ಬೇಸರ ತರುವಲ್ಲಿ ಕಾರಣವಾಗಿತ್ತು. ಗುತ್ತಿಗೆಯನ್ನು ಪಡೆದಿರುವ ತೇಜಸ್ ಕನಸ್ಟಂಕ್ಷನ್ಸ್ ಕಂಪನಿಯು ಕಾಮಗಾರಿಯನ್ನು ನಿಧಾನಗತಿಯಲ್ಲಿ ನಡಿತಾ ಇರೋದನ್ನ ನೋಡಿ ಸಾರ್ವಜನಿಕರು ಅಧಿಕಾರಿಗಳು ವಿರುದ್ಧ ಬೇಸರ ವ್ಯಕ್ತಪಡಿಸಿದರು.
ವಿವಿಧ ಸಂಘಟನೆಯ ಹೋರಾಟ ಮತ್ತು ನಿರಂತರ ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಬರದಿಂದ ಕಾಮಗಾರಿ ನಡೆಸುತ್ತಾ ಇರೋದನ್ನ ನೋಡಿ ಸಾರ್ವಜನಿಕರು ಸಂತೋಷ ತಂದಿದೆ ಎಂದು ವ್ಯಕ್ತಪಡಿಸಿದರು. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಅಥವಾ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಬೇಗನೆ ಕಾಮಗಾರಿ ಮುಗಿಸಿ ಬ್ರಿಜ್ಜ್ ನಿರ್ಮಿಸಬೇಕೆಂದು ನಾಗರಿಕರ ಒತ್ತಾಯವಾಗಿದೆ.
ಪ್ರಕಾಶ ಕುಂಬಾರ
ಬಾಗಲಕೋಟೆ