ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಹಿಂದೆ ಬರೆದ ಪತ್ರಕ್ಕೆ ಪ್ರತಿಕ್ರಿಯೆ ಬಾರದ ಹಿನ್ನೆಲೆ ಮತ್ತೊಮ್ಮೆ ಪತ್ರ ಬರೆದಿರುವ ಅವರು, ಪ್ರಜ್ವಲ್ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಪಡಿಸುವಂತೆ ಮೋದಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ
ಬೆಂಗಳೂರಿನಲ್ಲಿ ನಿಲ್ಲುತ್ತಿಲ್ಲ ರೋಡ್ ರೇಜ್ ಕೇಸ್… ನಡುರಸ್ತೆಯಲ್ಲೇ ಮತ್ತೊಂದು ಹಲ್ಲೆ…!
ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರವನ್ನು ಹೊಣೆ ಮಾಡಿದ ರಾಜ್ಯ ಸರ್ಕಾರ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸುವಂತೆ ಒತ್ತಾಯಿಸಿದೆ. ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸಿದರೆ ಪ್ರಜ್ವಲ್ ವಾಪಸ್ ಬರಲೇಬೇಕಾಗುತ್ತದೆ. ಹೀಗಾಗಿ ಆ ಕ್ರಮ ಕೈಗೊಳ್ಳಬೇಕು. ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
ವಿದೇಶದಿಂದ ಪ್ರಜ್ವಲ್ ರೇವಣ್ಣರನ್ನು ಕರೆಸುವುದೇ ನಮ್ಮ ಆದ್ಯತೆಯ ಕೆಲಸ. ಕಾನೂನಾತ್ಮಕವಾಗಿ ಎಲ್ಲಾ ರೀತಿಯಲ್ಲೂ ಸಹಕರಿಸಲು ಎಸ್ಐಟಿ ಸಿದ್ಧವಿದೆ. ಹೀಗಾಗಿ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಕ್ಕೆ ಪ್ರಧಾನಿ ಮೋದಿ ಸೂಚನೆ ನೀಡಬೇಕು. ವಿದೇಶಾಂಗ ಸಚಿವಾಲಯದ ಮೂಲಕ ಕೂಡಲೇ ಕ್ರಮಕೈಗೊಳ್ಳಬೇಕು. ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿ ಮೂಲಕವೂ ಕ್ರಮಕೈಗೊಳ್ಳಬೇಕು. ಪ್ರಜಲ್ವ್ ಪಾಸ್ಪೋರ್ಟ್ ರದ್ದುಪಡಿಸಬೇಕು ಎಂದು ಮೇ ಮೊದಲ ವಾರ ಪ್ರಧಾನಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದರು. ಆದರೆ, ಈ ಪತ್ರಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ಗೆ ಎಸ್ಐಟಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರದಲ್ಲಿರುವ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ನೀಡಲಾಗಿದೆ.