ಬೆಳಗಾವಿ:- ಜಿಲ್ಲೆಯ ಚಿಕ್ಕೋಡಿ, ರಾಯಬಾಗ ಮತ್ತು ಹುಕ್ಕೇರಿ ತಾಲೂಕಿನಲ್ಲಿ ಸಿಡಿಲಬ್ಬರದ ಮಳೆ ಸುರಿದಿದೆ.
IPL 2024: ಇಂದು ಹೈದರಾಬಾದ್- ರಾಜಸ್ಥಾನ್ ಪಂದ್ಯಕ್ಕೆ ಮಳೆಕಾಟ!?.. ಹೇಗಿದೆ ಹವಮಾನ ವರದಿ..!
ರಾಯಬಾಗ ಪಟ್ಟಣದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಸಿಡಿಲು ಬಡಿದಿದೆ. ಇದರಿಂದ ಒಬ್ಬ ಮಹಿಳೆ ಮೃತಪಟ್ಟಿದ್ದು ನಾಲ್ವರ ಸ್ಥಿತಿ ಗಂಭೀರವಾಗಿದೆ. ಇನ್ನು, ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲೂ ಕುರಿಮೇಯಿಸಲು ಹೋಗಿದ್ದವರಿಗೆ ಸಿಡಿಲು ಹೊಡೆದಿದೆ. ಒಬ್ಬ ಮೃತಪಟ್ಟಿದ್ರೆ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. 12 ಕುರಿಗಳು ಕೂಡ ಸಾವನ್ನಪ್ಪಿವೆ ಎನ್ನಲಾಗಿದೆ.
ಕಾಡಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಆಲೆಮನೆ ಧ್ವಂಸವಾಗಿದೆ. ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಮರ ಬಿದ್ದು ಆಕಳು ಸಾವನ್ನಪ್ಪಿದೆ. ಬಾಗಲಕೋಟೆಯಲ್ಲೂ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಅಲ್ಲೋಲ ಕಲ್ಲೋಲವೇ ಉಂಟಾಗಿದೆ.