ಬೆಂಗಳೂರು:- ಇಂದಿನಿಂದ ಕೆಲವು ಕಡೆ ಮಾತ್ರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ
ಮುನ್ಸೂಚನೆ ನೀಡಿದೆ.
ತೆಂಗಿನಕಾಯಿ – ಬೆಲ್ಲವನ್ನು ಒಟ್ಟಿಗೇ ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನವಿದೆ ಗೊತ್ತಾ..?
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಆಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಾಳೆಯಿಂದ ಮೇ 29ವರೆಗೆ ಕರ್ನಾಟಕ ಒಳನಾಡು ಹಾಗೂ ಕರಾವಳಿಯಲ್ಲಿ ಕೆಲವು ಕಡೆ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದಿನಿಂದ 29ವರೆಗೆ ಕೆಲವು ಕಡೆ ಮಾತ್ರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್ ಪಾಟೇಲ್ ಮಾಹಿತಿ ನೀಡಿದ್ದಾರೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇಂದು ಮತ್ತೆ ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಟ್ರಫ್ ಉಂಟಾಗುವ ಸಂಭವವಿದೆ. ಹೀಗಾಗಿ ಇಂದಿನಿಂದ ಕೆಲ ದಿನಗಳ ಕಾಲ ಮಳೆ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಮೇ ತಿಂಗಳಲ್ಲಿ ವಾಡಿಕೆಯ 8.9 ಸೆ.ಮೀ ಬದಲು 11.3 ಸೆ.ಮೀ ಮಳೆಯಾಗಿದೆ.
ಮೈಸೂರು ಜಿಲ್ಲೆಯಾದ್ಯಂತ ಉತ್ತಮ ಮಳೆ ಹಿನ್ನಲೆಯಲ್ಲಿ ಕೆರೆ ಕಟ್ಟೆಗಳು ತುಂಬಿವೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ತುಂಬಿದ ಕೆರೆ, ಕಟ್ಟೆಗಳಿಗೆ ಬಾಗಿನ ಅರ್ಪಿಸಿ ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ಈಶ್ವರಗೌಡನಹಳ್ಳಿ ಗ್ರಾಮದಲ್ಲಿ ತುಂಬಿದ ಕೆರೆಗೆ ಬಾಗಿನ ಅರ್ಪಿಸಿ ಸಂಭ್ರಮಿಸಲಾಗಿದೆ. ಬಾಗಲಕೋಟೆಯಲ್ಲಿ ನಿನ್ನೆ ಸಂಜೆ ಬೀಸಿದ ಬಿರುಗಾಳಿಯಿಂದ ಅವಾಂತರ ಸೃಷ್ಟಿಯಾಗಿದೆ. ಅರ್ಧದಷ್ಟು ಹಾರಿ ಹೋದ ಶೆಡ್ ನಲ್ಲಿ ತುಂಬು ಗರ್ಭಿಣಿ ಸಹಿತ ಕುಟುಂಬ ರಾತ್ರಿ ಕಳೆದು ಬೆಳಗು ಮಾಡಿದೆ. ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ ಎನ್ನಲಾಗಿದೆ.