ಬೆಂಗಳೂರು:- ಸೋರುತ್ತಿಲ್ಲದಿದ್ದರೂ ಛತ್ರಿ ಹಿಡಿದು ಬಸ್ ಚಲಾಯಿಸಿದ್ದ ಚಾಲಕನನ್ನು ಕೊನೆಗೂ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದು ಅವರ ತಾತ… ಸಿದ್ದು ಹೇಳಿಕೆಗೆ ಕುಮಾರಸ್ವಾಮಿ ಕಿಡಿ!
ಬಸ್ ಸೋರುತ್ತಿದೆ ಎನ್ನುವಂತೆ ಛತ್ರಿ ಹಿಡಿದು ಬಸ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದಂತೆಯೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ತನಿಖೆ ನಡೆಸಿದ್ದು, ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಹನುಮಂತಪ್ಪ ಕಿಲ್ಲೇದಾರ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಬಸ್ನಲ್ಲಿ ಮಳೆ ನೀರು ಸೋರುತ್ತಿರಲಿಲ್ಲ. ಬಸ್ ನಲ್ಲಿ ಪ್ರಯಾಣಿಕರು ಯಾರು ಇಲ್ಲದ ವೇಳೆಯಲ್ಲಿ ಕಂಡಕ್ಟರ್ ಅನಿತಾ ಹೆಚ್ ಬಳಿಯಿದ್ದ ಛತ್ರಿ ತೆಗೆದುಕೊಂಡು ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ಮಳೆ ನೀರು ಸೋರಿಕೆ ಬಗ್ಗೆ ಪ್ರಯಾಣಿಕರಿಂದ ಯಾವುದೇ ದೂರು ಬಂದಿಲ್ಲ ಎಂದು NWKRTC ಅಧಿಕಾರಿಗಳು ತಪಾಸಣೆ ನಡೆಸಿ ವರದಿ ಸಲ್ಲಿಸಿದ್ದಾರೆ.
ವಾಯವ್ಯ ಕರ್ನಾಟಕ ಸಾರಿಗೆ ಬಸ್ಸೊಂದರಲ್ಲಿ ಸೋರುತ್ತಿರುವ ಮಳೆನೀರಿನಿಂದ ರಕ್ಷಣೆ ಪಡೆಯುವ ರೀತಿ ಹನುಮಂತಪ್ಪ ಕಿಲ್ಲೇದಾರ ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು ಮತ್ತೊಂದು ಕೈಯಿಂದ ಬಸ್ ಚಲಾಯಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗಿದ್ದವು.