ಯುವ ಜನತೆಯಲ್ಲಿ ಮಾನಸಿಕ ಒತ್ತಡ ಹೆಚ್ಚುತ್ತಿರುವುದಕ್ಕೆ ಸಾಮಾಜಿಕ ಮಾಧ್ಯಮ ಕಾರಣ ಎಂದು ತಜ್ಞರು ಹೇಳಿದ್ದಾರೆ.
CT Ravi: ಸಿದ್ದರಾಮಯ್ಯ ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ಮಾತಾಡಬೇಕು -ಸಿಟಿ ರವಿ
ಇಂಟರ್ನೆಟ್ ಮತ್ತು ಸ್ಮಾರ್ಟ್ ಫೋನ್ ಬಳಕೆಯು ಜನರನ್ನು ಸಾಮಾಜಿಕ ಮಾಧ್ಯಮಕ್ಕೆ ವ್ಯಸನಿಯನ್ನಾಗಿ ಮಾಡಿದೆ. ಇಂದಿನ ಡಿಜಿಟಲ್ ಯುಗದಲ್ಲಿ, ಸಾಮಾಜಿಕ ಮಾಧ್ಯಮ ಜೀವನದ ಪ್ರಮುಖ ಭಾಗವಾಗಿದೆ. ಯುವ ಪೀಳಿಗೆ ಇದರಲ್ಲಿಯೇ ಗಂಟೆಗಟ್ಟಲೆ ಸಮಯ ಕಳೆಯುತ್ತಿದ್ದಾರೆ, ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮಾತುಕತೆ, ಮಾಹಿತಿ, ಮನರಂಜನೆಗಾಗಿ ಇದನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಆದರೆ ಇದರಿಂದ ಕೆಟ್ಟ ಪರಿಣಾಮಗಳಿವೆ ಎಂಬುದು ನಿಮಗೆ ತಿಳಿದಿದೆಯೇ, ವಿಶೇಷವಾಗಿ ಮಾನಸಿಕ ಆರೋಗ್ಯದ ವಿಷಯಕ್ಕೆ ಬಂದಾಗ ಸಾಮಾಜಿಕ ಮಾಧ್ಯಮವು ಯುವ ಜನರಲ್ಲಿ ಒತ್ತಡಕ್ಕೆ ಪ್ರಮುಖ ಕಾರಣವಾಗಬಹುದು ಎಂದು ಅಧ್ಯಯನಗಳು ತಿಳಿಸಿವೆ.
ಜನರು ಈ ರೀತಿಯಲ್ಲಿ ಹೆಚ್ಚು ಸಮಯ ಕಳೆದಾಗ, ಕೆಲಸ, ಅಧ್ಯಯನ, ಸ್ನೇಹ ಮತ್ತು ಕುಟುಂಬದವರೊಂದಿಗೆ ಬೆರೆಯುವುದು, ಇನ್ನಿತರ ಚಟುವಟಿಕೆಗಳಿಂದ ಸಂಪರ್ಕ ಕಡಿದುಕೊಳ್ಳಲು ಪ್ರಾರಂಭಿಸುತ್ತಾರೆ. ಇಂತಹ ನಿರ್ಧಾರಗಳು ಅವರನ್ನು ಒಂಟಿಯನ್ನಾಗಿ ಮಾಡುತ್ತದೆ ಇದರಿಂದ ಅವರು ಮಾನಸಿಕ ಒತ್ತಡಕ್ಕೆ ಗುರಿಯಾಗುತ್ತಾರೆ. ಕೆಲವೊಮ್ಮೆ ನಾವು ಇತರರು ಸಂತೋಷವಾಗಿರುವುದನ್ನು ನೋಡಿ ಅಥವಾ ಅವರ ಜೀವನ ಶೈಲಿಯಂತೆ ಇರಬೇಕೆಂದು ಬಯಸುತ್ತೇವೆ, ನಮ್ಮ ಮನಸ್ಸಿಗೆ ಇಂತಹ ವಿಷಯಗಳನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಕ್ರಮೇಣ ಯುವ ಜನತೆ ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳಲು ಪ್ರಾರಂಭಿಸುತ್ತಾರೆ. ಇದು ಅವರಿಗೆ ಅವರ ಮೇಲೆ ಕೀಳರಿಮೆ ಹುಟ್ಟಿಕೊಳ್ಳುವಂತೆ ಮಾಡುತ್ತದೆ ಇದರಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚು.
ರಾತ್ರಿ ತಡವಾಗಿ ಮಲಗುವುದರಿಂದ ನಿದ್ರೆ ಸಾಕಾಗುವುದಿಲ್ಲ, ಇದು ನಮಗೆ ಕಿರಿಕಿರಿಯನ್ನುಂಟು ಮಾಡುತ್ತದೆ ಫೇಸ್ ಬುಕ್, ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ನಂತಹ ಸಾಮಾಜಿಕ ಮಾಧ್ಯಮಗಳನ್ನು ತಡರಾತ್ರಿಯವರೆಗೆ ಬಳಸುವುದರಿಂದ ಕಣ್ಣುಗಳಲ್ಲಿ ನಿದ್ರೆಗೆ ಕಾರಣವಾದ ಮೆಲೋಟೋನಿಯಂ ಹಾರ್ಮೋನ್ ಬಿಡುಗಡೆಯಾಗುವುದನ್ನು ತಡೆಯುತ್ತದೆ. ಹಾಗಾಗಿ ತಡರಾತ್ರಿ ಸಾಮಾಜಿಕ ಮಾಧ್ಯಮವನ್ನು ಬಳಸುವುದರಿಂದ ನಿದ್ರೆಯ ಕೊರತೆ ಉಂಟಾಗುತ್ತದೆ, ಇದು ಆಯಾಸ, ಕಿರಿಕಿರಿ ಮತ್ತು ಏಕಾಗ್ರತೆಯ ಕೊರತೆಗೆ ಕಾರಣವಾಗುತ್ತದೆ, ಇದರಿಂದ ಒತ್ತಡ ಅನುಭವಿಸಬೇಕಾಗುತ್ತದೆ. ಅನೇಕ ಬಾರಿ ಯುವ ಜನತೆ ತಿಳಿದೋ ತಿಳಿಯದೆಯೋ ಸಾಮಾಜಿಕ ಮಾಧ್ಯಮದಲ್ಲಿ ಆನ್ಲೈನ್ ಕಿರುಕುಳ ಮತ್ತು ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ, ಇದು ಅವರಲ್ಲಿ ಮಾನಸಿಕ ಒತ್ತಡವನ್ನು ಸೃಷ್ಟಿಸುತ್ತದೆ