ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
World Cup 2024: ಟೀಮ್ ಇಂಡಿಯಾ ಜೊತೆ ಅಮೆರಿಕಗೆ ತೆರಳದ ವಿರಾಟ್.. ಮುಖ್ಯ ಕಾರಣ ಇಲ್ಲಿದೆ!
ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಮುಲ್ಕಿ,ಉಡುಪಿ, ಕುಶಾಲನಗರ, ಕಳಸ, ಪಣಂಬೂರು, ಸಿದ್ದಾಪುರ, ಮಂಗಳೂರು, ಆಗುಂಬೆ, ತರೀಕೆರೆ, ನಾಯಕನಹಟ್ಟಿಯಲ್ಲಿ ಮಳೆಯಾಗಿದೆ. ಬೆಳ್ತಂಗಡಿ, ನಂಜನಗೂಡು, ಬಾಳೆಹೊನ್ನೂರು, ಮಂಗಳೂರು ವಿಮಾನ ನಿಲ್ದಾಣ, ಕೋಟ, ಕೊಪ್ಪ, ಕಮ್ಮರಡಿ, ದೊಡ್ಡಬಳ್ಳಾಪುರ, ಚನ್ನಗಿರಿ, ಕುಂದಾಪುರ, ಹಾಸನ,ಬರಗೂರು, ಶ್ರವಣಬೆಳಗೊಳದಲ್ಲಿ ಮಳೆಯಾಗಿದೆ.
ವಿರಾಜಪೇಟೆ, ಶ್ರೀರಂಗಪಟ್ಟಣ, ಬೆಳ್ಳೂರು, ಕೊಟ್ಟಿಗೆಹಾರ, ಶ್ರೀರಂಗಪಟ್ಟಣ, ಹೆಸರಘಟ್ಟ, ಹುಂಚದಕಟ್ಟೆ, ಸಿಂಧನೂರು, ಜಾಲಹಳ್ಳಿ, ರಾಣೆಬೆನ್ನೂರಿನಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.