ತುಮಕೂರು:- ಭಾರತಕ್ಕೆ ಕಾಲಿಡುತ್ತಿದ್ದಂತೆ ಪ್ರಜ್ವಲ್ ಅರೆಸ್ಟ್ ಆಗುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ
Ashwath Narayan: ರಾಜ್ಯದಲ್ಲಿರುವ ಡೊಂಗಿ ಸರ್ಕಾರ ತೊಲಗಲಿ -ಅಶ್ವತ್ಥ್ ನಾರಾಯಣ್
ಈ ಸಂಬಂಧ ಮಾತನಾಡಿದ ಅವರು, ಇದೇ ತಿಂಗಳ 31ರಂದು ಬೆಳಗ್ಗೆ 10 ಗಂಟೆಗೆ ಎಸ್ಐಟಿ ಎದುರು ಬರ್ತಿನಿ, ಅವರಿಗೆ ಸಹಕಾರ ಮಾಡ್ತಿನಿ ಅಂತ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದನ್ನ ನಾನು ಸ್ವಾಗತ ಮಾಡ್ತಿನಿ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಇಡೀ ಜಗತ್ತೆ ಮಾತನಾಡುವ ಸಂದರ್ಭದಲ್ಲಿ ಅವರನ್ನ ಕರೆತರುವ ಪ್ರಯತ್ನವನ್ನ ಎಲ್ಲ ರೀತಿ ನಡೆಯುತ್ತಿತ್ತು. ಪ್ರಧಾನಮಂತ್ರಿಗಳಿಗೆ, ಮುಖ್ಯಮಂತ್ರಿಗಳು ಎರಡು ಬಾರಿ ಪತ್ರ ಬರೆದ್ರು. ಸಿಬಿಐಗೆ ರಿಕ್ವೆಸ್ಟ್ ಮಾಡಿಕೊಂಡಿದ್ವಿ. ಇಂಟರ್ ಪೋಲ್ಗೆ ರಿಕ್ವೆಸ್ಟ್ ಮಾಡಿಕೊಂಡಿದ್ವಿ, ಮನವಿ ಮಾಡಿದ್ವಿ. ಬ್ಲೂ ಕಾರ್ನರ್ ನೋಟಿಸ್ ಕೂಡಾ ಇಶ್ಯೂ ಮಾಡಿದ್ರು. ಆ ಪ್ರಕ್ರಿಯೆ ಕೂಡಾ ನಡೆಯುತ್ತಿತ್ತು ಅಂತ ಪರಮೇಶ್ವರ್ ಹೇಳಿದ್ದಾರೆ.
ಎಸ್ಐಟಿ ಬಳಿ ಏನ್ ಎವಿಡೆನ್ಸ್, ಏನು ಮಾಹಿತಿಗಳಿವೆ ಅದರ ಆಧಾರದ ಮೇಲೆ ತನಿಖೆ ಮುಂದುವರಿಯುತ್ತೆ. ಪ್ರಜ್ವಲ್ ರೇವಣ್ಣ ಬಂದ ತಕ್ಷಣವೇ ಬಂಧನ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನ ನೋಡಬೇಕು, ಅವರೇ ಶರಣಾಗ್ತಿನಿ ಅಂತ ಹೇಳಿದ್ದಾರೆ. ಅರೆಸ್ಟ್ ಅಂತು ಆಗ್ತಾರೆ. ಅರೆಸ್ಟ್ ಮಾಡೋಕೆ ಈಗಾಗಲೇ ವಾರಂಟ್ ಇಶ್ಯೂ ಆಗಿದೆ. ಬ್ಲೂ ಕಾರ್ನರ್ ನೋಟಿಸ್ ಕೊಟ್ಟು, ವಾರಂಟ್ ಕೊಟ್ಟಿರೋದ್ರಿಂದ ಅರೆಸ್ಟ್ ಮಾಡ್ಬೇಕು. ಈಗ ಅವರೇ ಶರಣಾಗ್ತಾರೆ ಅನ್ನುವಾಗ ಅದನ್ನ ಯಾವ ರೀತಿಯಾಗಿ ಎಸ್ ಐಟಿ ಅವರು ತೆಗೆದುಕೊಳ್ತಾರೆ ನೋಡಬೇಕು ಅಂತ ಪರಮೇಶ್ವರ್ ಹೇಳಿದ್ದಾರೆ.