ಮಂಡ್ಯ:- ನಾಗಮಂಗಲದ ಬೆಳ್ಳೂರಿನಲ್ಲಿ ಹಿಂದು ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳೂರು ಪೊಲೀಸ್ ಠಾಣೆಗೆ ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿದರು.
ಠಾಣೆಗೆ ಭೇಟಿ ನೀಡಿ ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್ ಮಾಹಿತಿ ನೀಡಿದರು. ಮಂಡ್ಯ ಎಸ್ಪಿ ಎನ್.ಯತೀಶ್ ರಿಂದ ಘಟನೆ ಕುರಿತು ಅಮಿತ್ ಸಿಂಗ್ ಮಾಹಿತಿ ಪಡೆದಿದ್ದಾರೆ. ಘಟನೆ ಖಂಡಿಸಿ ಇಂದು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುತ್ತೆ ಎಂಬ ಮಾಹಿತಿ ಹಿನ್ನಲೆ, ಬೆಳ್ಳೂರು ಪೊಲೀಸ್ ಠಾಣೆ ಬಳಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.