ಬೆಂಗಳೂರು:- ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಪತ್ನಿ ಭವಾನಿಗೂ ಬಂಧನ ಭೀತಿ ಶುರುವಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
Post Office Jobs: 10th ಪಾಸಾಗಿದ್ರೆ ಸಾಕು.! ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ
ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಡಿ ಭವಾನಿ (Bhavani Revanna) ಕಾರು ಚಾಲಕ ಅಜಿತ್ಗೂ ಎಸ್ಐಟಿ ನೋಟಿಸ್ ನೀಡಿದೆ. ಹೀಗಾಗಿ, ಪ್ರಕರಣ ತಮಗೂ ಉರುಳಾಗಬಹುದು ಅನ್ನೋ ಆತಂಕ ಭವಾನಿ ರೇವಣ್ಣಗೆ ಕಾಡುತ್ತಿದೆ. ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ.
ಜಾಮೀನು ಅರ್ಜಿಯ ವಿಚಾರಣೆ ಮಂಗಳವಾರವೂ ನಡೆದಿತ್ತು. ನಂತರ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು.
ಅಪಹರಣ ಪ್ರಕರಣದ ದೂರಿನಲ್ಲಿ ಭವಾನಿ ರೇವಣ್ಣ ಹೆಸರಿದ್ದರೂ ಎಫ್ಐಆರ್ ದಾಖಲಾಗಿಲ್ಲ. ಅವರ ವಿರುದ್ಧ ಯಾವುದೇ ಆರೋಪಗಳಿಲ್ಲ. ಎಸ್ಐಟಿ ಕೂಡಾ ಈವರೆಗೆ ನೋಟಿಸ್ ಜಾರಿಗೊಳಿಸಿಲ್ಲ. ಆದರೆ ಪತ್ರಿಕೆಗಳಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪ್ರಕಟವಾಗಿದೆ. ಇದಾದ ಬಳಿಕ ಮೇ 15ರಂದು ಭವಾನಿ ರೇವಣ್ಣ ಎಸ್ಐಟಿಗೆ ಪತ್ರ ಬರೆದು ತಮ್ಮ ವಿರುದ್ಧದ ಕೇಸಿನ ಸ್ಪಷ್ಟನೆ ಕೇಳಿದ್ದಾರೆ. ಆದರೆ ಎಸ್ಐಟಿ ಪ್ರತಿಕ್ರಿಯಿಸಿಲ್ಲ. ಈಗ ಮತ್ತೆ 2ನೇ ಬಾರಿಗೆ ನೋಟಿಸ್ ಜಾರಿಯಾಗಿದೆ ಎಂಬ ಸುದ್ದಿ ಬರುತ್ತಿದೆ.