ಬೆಂಗಳೂರು:– ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದ್ದು, ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು ಮತ್ತು ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡಲಿದೆ.
ಯಾರ ರಕ್ಷಣೆಯೂ ಶಿವನಿಗೆ ಬೇಕಿಲ್ಲ – ದೇಗುಲ ಧ್ವಂಸಕ್ಕೆ ಹೈಕೋರ್ಟ್ ಆದೇಶ!
ಈ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲು ಉದ್ದೇಶಿಲಾಗಿದೆ.
ಅರ್ಹತೆಗಳು :-
ಅರ್ಜಿದಾರರು ಕರ್ನಾಟಕದ ಕಾಯಂ ನಾಗರಿಕರಾಗಿರಬೇಕು
ಅರ್ಜಿದಾರರು ವೃತ್ತಿಯಲ್ಲಿ ರೈತರಾಗಿರಬೇಕು
ರೈತ ಪ್ರಾಥಮಿಕವಾಗಿ ರಾಗಿ ಉತ್ಪಾದಕನಾಗಿರಬೇಕು
ಈ ಯೋಜನೆಗೆ ಅರ್ಹತೆ ಪಡೆಯಲು ಕನಿಷ್ಠ ಒಂದು ಹೆಕ್ಟೇರ್ ಕೃಷಿ ಆಸ್ತಿ ಅಗತ್ಯವಿದೆ
ಬೇಕಾಗುವ ದಾಖಲೆ:-
ಆಧಾರ್ ಕಾರ್ಡ್ ಅಥವಾ ಗುರುತಿನ ಪುರಾವೆ
ಅರ್ಜಿದಾರರ ಭೂಮಿಗೆ ಸಂಬಂಧಿಸಿದ ದಾಖಲೆಗಳು
ಶಾಶ್ವತ ನಿವಾಸಿ ಪ್ರಮಾಣಪತ್ರ
ವಿಳಾಸ ಪುರಾವೆ
ಪಡಿತರ ಚೀಟಿ
ಬ್ಯಾಂಕ್ ಖಾತೆ ವಿವರಗಳು
ಮೊಬೈಲ್ ನಂಬರ್
ಭೂ ದಾಖಲೆ ವಿವರಗಳು
ಪಾಸ್ಪೋರ್ಟ್ ಗಾತ್ರದ ಫೋಟೋಗಳು