ಚಿಕ್ಕಮಗಳೂರು:- ಜಿಲ್ಲಾಯಾದ್ಯಂತ ಜೂನ್ 01 ರಿಂದ ಜೂನ್ 4ರವರೆಗೆ ಮದ್ಯ ನಿಷೇಧ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಹಲ್ಕಾ ಕೆಲಸ ಮಾಡಿರುವ ಆ DCM ಒಕ್ಕಲಿಗರ ನಾಯಕರಾಗಲು ಸಾಧ್ಯವೆ!? – ಯತ್ನಾಳ್ ಕಿಡಿ
ಜೂನ್ 1ರ ಸಂಜೆ 5 ಗಂಟೆಯಿಂದ ಜೂನ್ 4ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಕಡೆಯಲ್ಲೂ ಮದ್ಯ ನಿಷೇಧ ಮಾಡಲಾಗಿದೆ.
ಲೋಕಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಮತ ಎಣಿಕೆಯು ಜೂನ್ 4 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಅಭ್ಯರ್ಥಿಗಳ ಪರ ಮೆರವಣಿಗೆ, ಸಿಡಿಮದ್ದು ಸುಡುವುದು, ಮದ್ಯಪಾನ ಮಾಡಿ ಗಲಾಟೆ ಮಾಡುವುದು, ಇತ್ಯಾದಿ ಚಟುವಟಿಕೆಗಳನ್ನು ನಡೆಸುವುದರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ.
ಮತ ಎಣಿಕೆ ದಿನದಂದು ಸಾರ್ವಜನಿಕ ಶಾಂತಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಎಲ್ಲಾ ನಮೂನೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.