ಬೆಂಗಳೂರು:- ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್ಐಟಿ ಹುಡುಕಾಟ ನಡೆಸಿದೆ.
ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲವು ಭವಾನಿ ಜಾಮೀನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನ ವಶಕ್ಕೆ ಪಡೆಯಲು ಮುಂದಾಗಿದೆ. ಆದ್ರೆ, ಬಂಧನದ ಭೀತಿ ಹಿನ್ನೆಲೆಯಲ್ಲಿ ಯಾರ ಸಂಪರ್ಕಕ್ಕೂ ಸಿಗದೇ ಅಜ್ಙಾತ ಸ್ಥಳದಲ್ಲಿರುವ ಭವಾನಿಗಾಗಿ ಎಸ್ಐಟಿ ಶೋಧ ನಡೆಸಿದೆ. ಮತ್ತೊಂದೆಡೆ ಅಪಹರಣ ಪ್ರಕರಣದ ಸಂತ್ರಸ್ತೆ ಮಹಿಳೆ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ಗಾಗಿ ಎಸ್ಐಟಿ ಶೋಧ ನಡೆಸಿದೆ.
ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆಗೊಂಡಿರುವ ಹಿನ್ನೆಲೆಯಲ್ಲಿ ಎಸ್ಐಟಿ ಭವಾನಿ ರೇವಣ್ಣ ವಶಕ್ಕೆ ಪಡೆಯಲು ಮುಂದಾಗಿದೆ. ಸದ್ಯ ಅಜ್ಙಾತ ಸ್ಥಳಕ್ಕೆ ತೆರಳಿರುವ ಭವಾನಿ ರೇವಣ್ಣ ಎಲ್ಲಿದ್ದಾರೆ ಎಂದು ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.