ಬೆಂಗಳೂರು:- ನಗರೀಕರಣದ ಎಫೆಕ್ಟ್ ನಿಂದಾಗಿ ನಗರ ಪ್ರದೇಶಗಳಲ್ಲಿ ಜಾತ್ರೆಯಂತಹ ಧಾರ್ಮಿಕ ಆಚರಣೆಗಳು ಅಪರೂಪ ಎನ್ನುವಂತಾಗಿದೆ. ಆದ್ರೆ ಬೆಂಗಳೂರಿನ ಈವೊಂದು ಗ್ರಾಮದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಶ್ರೀಸೀತಾರಾಮ ಲಕ್ಷ್ಮಣ ಮತ್ತು ಆಂಜನೇಯ ಸ್ವಾಮಿ ಪರಿವಾರ ಸಮೇತವಾಗಿ ಬ್ರಹ್ಮ ರಥೋತ್ಸವ ಆಚರಿಸಿದ್ದಾರೆ. ಅಷ್ಟಕ್ಕೂ ವಿಜೃಂಭಣೆಯಿಂದ ನಡೆದ ಬ್ರಹ್ಮ ರಥೋತ್ಸವ ಎಲ್ಲಿ ಅಂತೀರಾ ನೋಡಿ ಈ ರಿಪೋರ್ಟ್ ನಲ್ಲಿ..
ಎರಡು ಮಕ್ಕಳ ತಾಯಿಯಾದರೂ ಕಮ್ಮಿಯಾಗಿಲ್ಲ ಕರೀನಾ ಸೌಂದರ್ಯ: ಬೆಬೋ ಬ್ಯೂಟಿ ಕಂಡು ಥ್ರಿಲ್ ಆದ ಫ್ಯಾನ್ಸ್
ಹೌದು ಬೆಂಗಳೂರು ಹೊರವಲಯ ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ಈ ಬಾರಿ ಅದ್ದೂರಿ ಬ್ರಹ್ಮ ರಥೋತ್ಸವವನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ಸೀತಾರಾಮ ಲಕ್ಷ್ಮಣ ಮತ್ತು ವೀರಾಂಜನೆಯ ಸ್ವಾಮಿ ದೇವಾಲಯವೂ ತನ್ನದೆ ಆದ ವೈಶಿಷ್ಟ್ಯತೆಯನ್ನ ಹೊಂದಿದೆ. ಈ ಬಾರಿ ಪಲ್ಲಕ್ಕಿ ಉತ್ಸವಗಳ ಜೊತೆಗೆ ಮೊದಲನೇ ಬಾರಿಗೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ರಥದಿಂದ ಅದ್ದೂರಿ ಬ್ರಹ್ಮರಥೋತ್ಸವ ನಡೆಸಲಾಯಿತು. ದೇವಾಲಯದಿಂದ ರಥವನ್ನ ಭಕ್ತರು ಜೈಶ್ರೀರಾಮ್ ಘೋಷಣೆಗಳನ್ನ ಕೂಗುತ್ತ ರಥವನ್ನು ಎಳೆಯುವ ಮೂಲಕ ಸಾವಿರಾರು ಸಂಖ್ಯೆಯ ಭಕ್ತರು ದೇವರ ಕೃಪೆಗೆ ಪಾತ್ರರಾದರು. ಬ್ರಹ್ಮರಥೋತ್ಸವ ಹಿನ್ನೆಲೆ ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ಕಲಾತಂಡಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ನೆರೆದಿದ್ದ ಜನರನ್ನು ರಂಜಿಸಿದರು.
ಇನ್ನೂ ಶ್ರೀಸೀತಾರಾಮ ಲಕ್ಷ್ಮಣ ಸೇರಿದಂತೆ ವೀರಾಂಜನೇಯ ಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸುತ್ತಿದ್ದಂತೆಯೇ ನೆರೆದಿದ್ದ ಅಪಾರ ಜನಸ್ತೋಮ ಜಯಘೋಷ ಕೂಗಿ ದೇವರ ಕೃಪೆಗೆ ಪಾತ್ರರಾದರು. ಭಕ್ತಾದಿಗಳು ಹಗ್ಗಗಳಿಂದ ತೇರನ್ನು ದೇವಾಲಯದಿಂದ ಸುಮಾರು ಎರಡು ಕಿಲೋಮೀಟರ್ ದೂರ ಎಳೆದು ತಂದರು. ತೇರನ್ನು ಎಳೆಯುತ್ತಿದ್ದಂತೆಯೇ ಭಕ್ತರು ದವನ ಚುಚ್ಚಿದ ಬಾಳೆಹಣ್ಣನ್ನು ತೇರಿಗೆ ಎಸೆಯುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿಕೊಂಡರು.
ರಥೋತ್ಸವ ಅಂಗವಾಗಿ ಅಲಂಕೃತ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದು, ಬೊಮ್ಮನಹಳ್ಳಿ, ಸಿಂಗಸಂದ್ರ, ಹೆಚ್.ಎಸ್.ಆರ್ ಲೇಔಟ್ ಸೇರಿದ ನಾನಾ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಭಕ್ತರು ದೇವರ ಕೃಪೆಗೆ ಪಾತ್ರರಾಗಿದ್ದಾರೆ.