ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಾಳೆಯಿಂದ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕ್ಲೀನ್ ಬೆಂಗಳೂರು ಮಾಡೋಕೆ ಪಾಲಿಕೆ ಸಜ್ಜು.. ಗುಂಡಿ, ಕಸದ ಸಮಸ್ಯೆ ಮಾನಿಟರ್ಗೆ ‘AI’!
ಜೂನ್ 2ರ ನಂತರ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ಮುಂಗಾರು ಆರಂಭವಾಗಲಿದೆ. ಸದ್ಯ ಪೂರ್ವ ಮುಂಗಾರು ಮಳೆ ಇಳಿಕೆಯಾಗಿದೆ. ಇನ್ನು ಕರಾವಳಿ ಭಾಗದಲ್ಲಿ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣದಲ್ಲಿ ವರುಣ ಅಬ್ಬರಿಸಿದ್ದಾನೆ. ಮನೆಗಳಿಗೆ ನೀರು ನುಗ್ಗಿ ಪರದಾಟ ನಡೆಸಿದ್ದಾರೆ.
ಈ ಬಾರಿ ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಕಟ್ಟೆಚ್ಚರದ ಅಗತ್ಯವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಬಿಎಂಪಿಗೆ ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ ಸೂಚನೆ ನೀಡಿದ್ದಾರೆ. ಜೂನ್ 2ರಿಂದ ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ. ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ನಗರದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಒಣ ಮರಗಳು, ಶಿಥಿಲ ಕಟ್ಟಡಗಳ ಬಗ್ಗೆ ನಿಗಾವಹಿಸಲು ಹವಾಮಾನ ತಜ್ಞರ ಮುನ್ಸೂಚನೆ ನೀಡಿದ್ದಾರೆ. ಏಕಂದ್ರೆ ಭಾರೀ ಮಳೆಯಾಗಲಿದೆ.