ತುಮಕೂರು:-ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಲಾಗಿದೆ.
ತುಮಕೂರು ಜಿಲ್ಲೆ ಪಾವಗಡದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಫೆ. 22 ರಂದು ಶಸ್ತ್ರಚಿಕಿತ್ಸೆಗೆ ಮಹಿಳೆಯರು ಒಳಗಾಗಿದ್ದರು. ಚಿಕಿತ್ಸೆಗೆ ಒಳಗಾಗಿದ್ದ ಅನಿತ, ಅಂಜಲಿ, ನರಸಮ್ಮ ಒಬ್ಬರಾದ ಬಳಿಕ ಒಬ್ಬರು ಮೃತಪಟ್ಟಿದ್ದರು..
ಹೀಗಾಗಿ ಮೃತ ಪ್ರತಿ ಕುಟುಂಬಕ್ಕೆ ತಲಾ 4 ಲಕ್ಷಗಳ ರೂ ಪರಿಹಾರವನ್ನು ಸರ್ಕಾರ ಘೋಷಿಸಿದೆ. ಮೃತರ ಮಕ್ಕಳು ಅಪ್ರಾಪ್ತರಾದಲ್ಲಿ ಮಕ್ಕಳು ಹಾಗೂ ತಂದೆಯ ಹೆಸರಿನಲ್ಲಿ ಜಂಟಿ ಖಾತೆ ತೆರೆಯಬೇಕು. ಪರಿಹಾರ ಧನವನ್ನು ಸ್ಥಿರ ಠೇವಣಿ(ಎಫ್.ಡಿ) ರೂಪದಲ್ಲಿ ಅಪ್ರಾಪ್ತ ಮಕ್ಕಳ ಹೆಸರಿನಲ್ಲಿ ಇಡಲು ಸೂಚನೆ ನೀಡಿದೆ. ಖಾತೆಯಿಂದ ಬರುವ ಬಡ್ಡಿ ಹಣವನ್ನು ಮಾತ್ರ ಮಕ್ಕಳ ಪೋಷಣೆಗೆ ಬಳಸಿಕೊಳ್ಳಲು ಆದೇಶ ಹೊರಡಿಸಲಾಗಿದೆ.
ಮೂವರು ಮಹಿಳೆಯ ಸಾವು ಪ್ರಕರಣ ರಾಜ್ಯಾದ್ಯಂತ ಹೆಚ್ಚು ಗಮನ ಸೆಳೆದಿತ್ತು.ವೈದ್ಯರು ಹಾಗೂ ಸಿಬ್ಬಂದಿಗಳ ವಿರುದ್ಧ ಪೋಷಕರು , ಕುಟುಂಬಸ್ಥರು ಹೋರಾಟ ನಡೆಸಿದ್ದರು.ಪಾವಗಡ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ನಡೆದಿತ್ತು.