ಚಿಕ್ಕಬಳ್ಳಾಪುರ:- ಸರ್ಕಾರದ ಲೇಟರ್ ಹೆಡ್ ದುರ್ಬಳಕೆ ಮಾಡಿದ ಆರೋಪದಡಿ ಮಾಜಿ ಸಚಿವ ಡಾ.ಸುಧಾಕರ್ ವಿರುದ್ಧ ಕೇಸ್ ದಾಖಲಾಗಿದೆ.
ಅತಿಯಾದ ಬೆವರಿನಿಂದ ಕಿರಿ ಕಿರಿ ಉಂಟಾಗುತ್ತಿದ್ಯಾ!?.. ಹಾಗಿದ್ರೆ ಈ ಸಲಹೆ ಪಾಲಿಸಿ!
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್ ಹೆಡ್ನಲ್ಲಿ ಚುನಾವಣಾ ಆಯುಕ್ತರು, ಬೆಂಗಳೂರು ವಿಭಾಗಕ್ಕೆ ಪತ್ರ ವ್ಯವಹಾರ ಮಾಡಿದ್ದಾರೆ. ಹೀಗಾಗಿ ಬೆಂಗಳೂರು ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆಯನ್ನು ಅನಧಿಕೃತವಾಗಿ ಬಳಕೆಮಾಡಿರುವುದರಿಂದ ಈ ಬಗ್ಗೆ, ಸದರಿಯವರ ವಿರುದ್ಧ ಪೋಲೀಸ್ ಅಧಿಕಾರಿಗಳ ಮೂಲಕ ಮಾಜಿ ಸಚಿವ ಡಾ. ಕೆ.ಸುಧಾಕರ್ ರವರ ವಿರುದ್ಧ ಉಲ್ಲೇಖ ರೀತಾ ಕ್ರಮ ಕೈಗೊಳ್ಳುವಂತೆ ಮಾನ್ಯ ಜಿಲಾ ಚುನಾವಣಾಧಿಕಾರಿಗಳು ಸೂಚಿಸಿ ಪತ್ರವನ್ನು ರವಾನಿಸಿಕೊಂಡಿರುತ್ತಾರೆ.