ದೆಹಲಿ:- ಅರವಿಂದ್ ಕೇಜ್ರಿವಾಲ್ ಗೆ ಜೈಲಿನಲ್ಲಿ ಬಿಜೆಪಿ ಕಿರುಕುಳ ನೀಡುತ್ತಿದೆ ಎಂದು ಎಎಪಿ ಆರೋಪ ಮಾಡಿದೆ.
ತಿಹಾರ್ ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರತೀಯ ಜನತಾ ಪಕ್ಷ ಕಿರುಕುಳ ನೀಡುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ. ಅರವಿಂದ ಕೇಜ್ರಿವಾಲ್ ಅವರನ್ನು ಬಿಜೆಪಿಯವರು ನಕಲಿ ಪ್ರಕರಣದಲ್ಲಿ ಬಂಧಿಸಿದ್ದಾರೆ. ನಿನ್ನೆ ಅರವಿಂದ್ ಕೇಜ್ರಿವಾಲ್ ಶರಣಾಗಿ ತಿಹಾರ್ ಜೈಲಿಗೆ ಹೋಗಿದ್ದರು. ಆದರೆ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರಕ್ಕೆ ಇನ್ನೂ ನೆಮ್ಮದಿ ಸಿಕ್ಕಿಲ್ಲ. ಅರವಿಂದ್ ಕೇಜ್ರಿವಾಲ್ಗೆ ಕಿರುಕುಳ ನೀಡುವುದನ್ನು ಬಿಜೆಪಿ ಬಿಡುತ್ತಿಲ್ಲ. ಕೂಲರ್ ಕೂಡ ನೀಡದ ಸೆಲ್ನಲ್ಲಿ ಅವರನ್ನು ಇರಿಸಲಾಗಿದೆ ಎಂದು ಸಚಿವೆ ಅತಿಶಿ ಆರೋಪಿಸಿದ್ದಾರೆ
ದೆಹಲಿಯಲ್ಲಿ ತಾಪಮಾನವು 48 ಡಿಗ್ರಿ, 50 ಡಿಗ್ರಿ ಸೆಲ್ಸಿಯಸ್ ತಲುಪುತ್ತಿರುವ ಸಮಯದಲ್ಲಿ ತಿಹಾರ್ ಜೈಲಿನಲ್ಲಿರುವ ಕುಖ್ಯಾತ ಕ್ರಿಮಿನಲ್ಗಳಿಗೆ ಕೂಲರ್ಗಳನ್ನು ನೀಡಲಾಗುತ್ತಿದೆ. ಆದರೆ ದೆಹಲಿಯ ಮುಖ್ಯಮಂತ್ರಿಯಾಗಿರುವ ಅರವಿಂದ್ ಕೇಜ್ರಿವಾಲ್ಗೆ ಈ ಬಿಸಿಲಿನ ಶಾಖದಲ್ಲಿಯೂ ಕೂಲರ್ ನೀಡಿಲ್ಲ. ಇದಕ್ಕೆ ಬಿಜೆಪಿ ನಾಯಕರು ಹಾಗೂ ಅವರ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಉತ್ತರಿಸಬೇಕು. ಇದು ಅವರು ಎಷ್ಟು ಕೆಳ ಮಟ್ಟಕ್ಕೆ ಇಳಿದು ರಾಜಕೀಯ ಮಾಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಟೀಕಿಸಿದ್ದಾರೆ