ವಿಜಯಪುರ:– ವಿಜಯಪುರ ಎಸ್ಸಿ ಮೀಸಲು ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ವಿಜಯಪುರದ ಸೈನಿಕ ಶಾಲೆಯಲ್ಲಿ ಮತ ಎಣಿಕೆ ಕೇಂದ್ರ ಇದ್ದು, ಮತ ಎಣಿಕೆ ಕೇಂದ್ರದ ಒಳಗೂ ಮತ್ತು ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ತಪಾಸಣೆ ನಡೆಸಿ ಭದ್ರತಾ ಸಿಬ್ಬಂದಿ ಒಳಗೆ ಬಿಟ್ಟಿದ್ದಾರೆ. ಬೆಳಿಗ್ಗೆಯಿಂದಲೇ ಮತ ಎಣಿಕೆ ಕೇಂದ್ರಕ್ಕೆ ಸಿಬ್ಬಂದಿಗಳು ಆಗಮಿಸುತ್ತಿದ್ದಾರೆ. ಪ್ರಮುಖ ರಾಷ್ಟ್ರೀಯ ಪಕ್ಷವಾದ ಬಿಜೆಪಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಮತ ಎಣಿಕೆ ಏಜೆಂಟ್’ಗಳೂ ಮತ ಎಣಿಕೆ ಕೇಂದ್ರದತ್ತ ಆಗಮಿಸಿದ್ದಾರೆ.
ಕಳೆದ 25 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ
ವಿಜಯಪುರ ಎಸ್ ಸಿ ಮೀಸಲು ಲೋಕಸಭಾ ಮತಕ್ಷೇತ್ರ, ಸತತ ಈ ಮತಕ್ಷೇತ್ರದಿಂದ ನಾಲ್ಕನೇ ಬಾರಿ ಆಯ್ಕೆ ಬಯಸಿ ಬಿಜೆಪಿ ಪಕ್ಷದಿಂದ ಹಿರಿಯ ರಾಜಕಾರಣಿ ರಮೇಶ ಜಿಗಜಿಣಗಿ ಕಣಕ್ಕಿಳಿದಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಮಾಜಿ ಶಾಸಕ ಮತ್ತು ನಿಕಟಪೂರ್ವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಕಣದಲ್ಲಿದ್ದು, ಮತದಾರರಿ ಯಾರಿಗೆ ಆಶೀರ್ವಾದ ಮಾಡಿದ್ದಾರೆ ಕಾದು ನೋಡಬೇಕಾಗಿದೆ.