ಬೆಂಗಳೂರು:- ಮೋದಿ ಅವರ ಜನಪ್ರಿಯತೆ ಕುಗ್ಗಿ ಹೋಗಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ನನಗೆ ಮತ್ತೊಮ್ಮೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ.. ಭಾವುಕ ಪೋಸ್ಟ್ ಮಾಡಿದ ಮೋದಿ!
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ವೋಟಿಂಗ್ ಶೇರ್ ಶೇ. 5 ರಷ್ಟು ಕಡಿಮೆ ಆಗಿದೆ, ಆದರೆ, ಓಟಿಂಗ್ ಶೇರ್ ಜಾಸ್ತಿ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ಗೆ ಹೆಚ್ಚು ಸೀಟ್ ಬಂದಿಲ್ಲ. ದೇಶದಲ್ಲಿ ಕಾಂಗ್ರೆಸ್ಗೆ ಶೇ. 3 ರಷ್ಟು ಓಟಿಂಗ್ ಜಾಸ್ತಿ ಆಗಿದೆ. ಬಿಜೆಪಿ 2019ರಲ್ಲಿ 303 ಗೆದ್ದಿತ್ತು. ಈಗ, 246 ಗೆದ್ದಿದೆ. ಬಿಜೆಪಿ ಅತಿ ದೊಡ್ಡ ಪಾರ್ಟಿ ಆಗಿ ಬಂದಿದೆ. ಆದರೆ, ಎಲ್ಲೂ ಮೋದಿ ಅಲೆ ಇರಲಿಲ್ಲ. ಮೋದಿಯವರ ಜನಪ್ರಿಯತೆ ಕಡಿಮೆ ಆಗಿದೆ ಎಂದು ಸಿಎಂ ಹೇಳಿದರು.
ಯಾರು ಸರ್ಕಾರ ರಚಿಸುತ್ತಾರೋ ಅಂತ ನನಗೆ ಗೊತ್ತಿಲ್ಲ ಆದರೆ ಬಿಜೆಪಿಗೆ ಮೆಜಾರಿಟಿ ಸೀಟ್ ಅಂತೂ ಬಂದಿಲ್ಲ.
ಮೋದಿ ಸೋಲುತ್ತೇವೆ ಅಂತ ಗೊತ್ತಾಗಿ ಧರ್ಮದ ಆಧಾರದ ಮೇಲೆ ಮತ ಕೇಳಲು ಶುರು ಮಾಡಿದರು. ಕೋಮುವಾದದ ಮೇಲೆ ಮತ ಕೇಳಿದ್ದು ವರ್ಕ್ಔಟ್ ಆಗಿಲ್ಲ, ಎನ್ಡಿಎಗೆ 60 ಸ್ಥಾನ ಕಡಿಮೆ ಆಗಿವೆ
ನರೇಂದ್ರ ಮೋದಿ ಪ್ರಧಾನಿ ಆಗಲು ನೈತಿಕ ಹಕ್ಕಿಲ್ಲ. ಇ.ಡಿ. ದುರ್ಬಳಕೆ ಮಾಡಿಕೊಂಡು ದೆಹಲಿ ಮುಖ್ಯಮಂತ್ರಿಯನ್ನು ಜೈಲಿಗೆ ಕಳುಹಿಸಲಾಯಿತು. ಅಯೋಧ್ಯೆಯಲ್ಲಿ ಬಿಜೆಪಿ ಸೋತಿದೆ, ಅಲ್ಲಿ ಎಸ್ಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಒಟ್ಟಾರೆ ಬಿಜೆಪಿಗೆ ದೊಡ್ಡ ಹಿನ್ನಡೆ ಆಗಿದೆ
ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ದೇಶದಲ್ಲಿ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿಯವರು ಮಾಡಿದ ಯಾತ್ರೆಯಿಂದ ಇಂಡಿ ಮೈತ್ರಿ ಕೂಟಕ್ಕೆ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿಯವರು ಎರಡೂ ಕಡೆ ಗೆಲುವು ಸಾಧಿಸಿದ್ದಾರೆ, ಹೀಗಾಗಿ ಅವರಿಗೆ ನಾನು ವೈಯಕ್ತಿಕವಾಗಿ ಅಭಿನಂದನೆ ತಿಳಿಸುವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸಿಕೊಳ್ಳಲು ಜನರು ಮತದಾನ ಮಾಡಿದ್ದಾರೆ. ನಮಗೆ ಗೆಲುವು ಆಗಿಲ್ಲ ನಿಜ, ಆದರೆ ಶೇಕಡಾವಾರು ಮತ ಪ್ರಮಾಣ ಜಾಸ್ತಿ ಆಗಿದೆ ಎಂದು ತಿಳಿಸಿದರು