ಬೆಂಗಳೂರು:– ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲೂ\
ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇ’ಳೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮೊಸರು ಹುಳಿಯಾಗದಂತಿರಲು ತಡೆಯಲು ಏನು ಮಾಡ್ಬೇಕು!?.. ಇಲ್ಲಿದೆ ಸರಳ ಟಿಪ್ಸ್!
ರಾಜ್ಯದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳನ್ನು ಮುಂಗಾರು ಆವರಿಸಿದ್ದು, ಜೂನ್ 4 ರಿಂದ 7 ದಿನಗಳು ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗಲಿದೆ. ಗುಡುಗು–ಮಿಂಚಿನ ಆರ್ಭಟದೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದೂ ಇಲಾಖೆ ಮುನ್ಸೂಚನೆ ನೀಡಿದೆ
ರಾಜ್ಯದ ಹಲವೆಡೆ ಮುಂಗಾರು ಕೊಂಚ ಮಟ್ಟಿಗೆ ಕ್ಷೀಣಿಸಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಳೆದ 2 ದಿನಗಳಲ್ಲಿ ಮಳೆ ಇಳಿಕೆ ಆಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆಯೂ ಇದೆ
ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಕಡೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಈಗಾಗಲೇಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಆದರೆ, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗದಿದ್ದರೂ ಮುಂದಿನ ದಿನಗಳಲ್ಲಿ ಮುಂಗಾರು ಚುರುಕು ಆಗುವ ಸಾಧ್ಯತೆ ಇದೆ. ಜೂನ್ 2 ರಂದು ರಾಜ್ಯಕ್ಕೆ ಮುಂಗಾರು ಅಧಿಕೃತವಾಗಿ ಪ್ರವೇಶ ಮಾಡಿದೆ. ಅದಾಗ್ಯೂ ಕರಾವಳಿ ಭಾಗದ ಕೆಲವು ಕಡೆಗಳಲ್ಲಷ್ಟೇ ಮುಂಗಾರು ಮಳೆ ಉತ್ತಮವಾಗಿ ಸುರಿದಿದೆ.