ಬೆಂಗಳೂರು:- ಇಂದಿರಾ ನಗರದಲ್ಲಿ ಆಟೋ ಚಾಲಕ ಗುಟ್ಕಾ ತಿಂದು ಯುವತಿಯ ಮೇಲೆ ಉಗಿದ ಘಟನೆ ಜರುಗಿದ್ದು, ಪೊಲೀಸರೇ ಇವರ ಮೇಲೆ ಕ್ರಮ ಯಾವಾಗ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ!
ವೃತ್ತಿಯಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವಂತ ಪರಿಶಿ ಎಂಬ ಯುವತಿ ತನಗಾದ ಕಹಿ ಅನುಭವದ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂದಿರಾ ನಗರದಲ್ಲಿ ತಾನು ನಡೆದುಕೊಂಡು ಹೋಗುತ್ತಿರುವ ವೇಳೆ ಆಟೋ ಚಾಲಕನೊಬ್ಬ ತನ್ನ ಮೇಲೆ ಉಗುಳಿದ್ದಾನೆ ಎಂದು ಹೇಳಿದ್ದಾರೆ. ಜೊತೆಗೆ ಈ ಕುರಿತ ಫೋಟೋಗಳನ್ನು ಕೂಡಾ ಶೇರ್ ಮಾಡಿದ್ದಾರೆ. ಈ ಪೋಸ್ಟ್ಗೆ ಉತ್ತರಿಸಿರುವ ಬೆಂಗಳೂರು ಪೊಲೀಸ್ ದಯವಿಟ್ಟು ಆ ಸ್ಥಳದ ವಿವರವನ್ನು ನೀಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಜೂನ್ 03 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತಿಸುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ನೆಟ್ಟಿಗರು ಆಟೋ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಇನ್ನೂ ಎಷ್ಟೇ ಜಾಗೃತಿ ಮೂಡಿಸಿದರೂ ಕೂಡಾ ಕೆಲವೊಬ್ಬರು ಪಾನ್ ಮಸಾಲ, ಗುಟ್ಕಾ ಇತ್ಯಾದಿ ಹೊಗೆ ರಹಿತ ತಂಬಾಕು ಪದಾರ್ಥಗಳನ್ನು ತಿಂದು ಎಲ್ಲೆಂದರಲ್ಲಿ ಉಗಿದು ನಿಯಮ ಉಲ್ಲಂಘಿಸುತ್ತಿರುತ್ತಾರೆ. ಇನ್ನೂ ಸಾರ್ವಜನಿಕ ಸ್ಥಳಗಳಲ್ಲಂತೂ ಉಗುಳುವವರ ಸಂಖ್ಯೆ ಕಡಿಮೆ ಆಗಿಲ್ಲ.