ಬೆಂಗಳೂರು:- ಸುಬ್ಬಯ್ಯ ಸರ್ಕಲ್ ಬಳಿ ಭಾರೀ ಮಳೆಯಿಂದ ರಸ್ತೆ ಕುಸಿದಿದೆ. ಹೀಗಾಗಿ ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೇಡ್ ಹಾಕಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ರಸ್ತೆ ಕುಸಿದರೂ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ.
ನಿನ್ನೆ ಸುರಿದ ಮಳೆಗೆ ಮಳೆಯಿಂದ ರಿಚಮಂಡ್ ಸರ್ಕಲ್ನಿಂದ ಕಾರ್ಪೊರೇಷನ್ ಕಡೆಗೆ ತೆರಳುವ ಮಾರ್ಗದಲ್ಲಿ ರಸ್ತೆ ಕಳೆದ 2 ಗಂಟೆ ಹಿಂದೆ ಕುಸಿತವಾಗಿದ್ದು, ರಸ್ತೆ ಕೆಳಗಡೆ ಅಂಡರ್ಗ್ರೌಂಡ್ ಡ್ರೈನೇಜ್ ಇರುವ ಕಾರಣ ಮಳೆಯಾದರೆ ಇನ್ನೂ ರಸ್ತೆ ಕುಸಿಯುವ ಆತಂಕ ಎದುರಾಗಿದೆ. ಇದರಿಂದ ಕೆಲಸ ಮುಗಿಸಿ ಮನೆಗೆ ತೆರಳುವವರಿಗೆ ಟ್ರಾಫಿಕ್ ಬಿಸಿ ತಟ್ಟಿದ್ದು, ರಸ್ತೆಯಲ್ಲಿಯೇ ಪರದಾಡುವಂತಾಗಿದೆ.