ನವದೆಹಲಿ:- ಇಂದು ಪ್ರಧಾನಿಯಾಗಿ ಪ್ರಮಾಣ ವಂಚನ ಸ್ವೀಕಾರಕ್ಕೂ ಮುನ್ನ ಬೆಳಿಗ್ಗೆಯೇ ಗಾಂಧೀಜಿ, ಅಟಲ್ ಸ್ಮಾರಕಕ್ಕೆ ನರೇಂದ್ರ ಮೋದಿ ನಮಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಕೇಸ್.. ಕಾಂಗ್ರೆಸ್ ನುಂಗಿದ ಹಣ ವಾಪಸ್ ಬರಲ್ಲ ಎಂದ JDS!
ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿವುದಕ್ಕೂ ಮುನ್ನ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ರಾಜ್ಘಾಟ್ನಲ್ಲಿ ಇರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಸ್ಮಾರಕಕ್ಕೆ ಆಗಮಿಸಿ ನಮಿಸಿದರು. ಬೆಳಗ್ಗೆ 7.15ರ ಸುಮಾರಿಗೆ ಮಹಾತ್ಮಾ ಗಾಂಧಿ ಅವರ ಸ್ಮಾರಕಕ್ಕೆ ಆಗಮಿಸಿ ಹೂಗುಚ್ಛ ಇಟ್ಟು ನಮನ ಸಲ್ಲಿಸಿದ ಮೋದಿ, ನಂತರ ದೆಹಲಿಯಲ್ಲೇ ಇರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕಕ್ಕೂ ಆಗಮಿಸಿ ವಂದನೆ ಸಲ್ಲಿಸಿದರು. ಸದೈವ್ ಅಟಲ್ ಸ್ಮಾರಕಕ್ಕೆ ಆಗಮಿಸಿ ಬಿಜೆಪಿಯ ಹಿರಿಯ ನಾಯಕನಿಗೆ ಪುಷ್ಪ ನಮನ ಅರ್ಪಿಸಿದರು.
ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದರು. ಅಲ್ಲಿ ಅವರು ಭಾರತಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಿದರು. ಈ ವೇಳೆ ನಿಯೋಜಿತ ಪ್ರಧಾನಿ ಮೋದಿಯೊಂದಿಗೆ ನಿರ್ಗಮಿತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೂ ಜೊತೆಗಿದ್ದರು.
ಶುಕ್ರವಾರ ನಡೆದ ಎನ್ಡಿಎ ಸಭೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಹುದ್ದೆಗೆ ನಾಮನಿರ್ದೇಶನಗೊಂಡಿದ್ದಾರೆ. ನರೇಂದ್ರ ಮೋದಿ ಅವರು ಇಂದು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ನಂತರ ಈ ಸಾಧನೆ ಮಾಡಿದ ಎರಡನೇ ರಾಜಕಾರಣಿಯಾಗಿ ಅವರು ಹೊರಹೊಮ್ಮಲಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರಿಗೆ ಕರೆ ಬಂದಿದೆ ಎಂದು ಹೇಳಲಾಗುತ್ತಿದೆ. ಆದರೆ, ಇಂದು ಅವರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಪ್ರಮಾಣ ವಚನಕ್ಕೆ ಹಾಜರಾಗಲು ನಿರಾಕರಿಸಿದ್ದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ತೃಣಮೂಲ ಕಾಂಗ್ರೆಸ್ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ