ನವದೆಹಲಿ:– ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದು, ಇಡೀ ದೆಹಲಿಗೆ 3 ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ.
ಚಂದನ್ -ನಿವೇದಿತಾ ಡಿವೋರ್ಸ್ ಗೆ ಈ ವ್ಯಕ್ತಿ ಕಾರಣವಾ!?.. ಇವರ ಹೆಸರು ತುಣುಕು ಹಾಕಿಕೊಳ್ತಿರೋದ್ಯಾಕೆ!?
ರಾಷ್ಟ್ರಪತಿ ಭವನಕ್ಕೆ ಐದು ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಎಸ್ಡಬ್ಲ್ಯೂಎಟಿ ಹಾಗೂ ಎನ್ಎಸ್ಜಿ ಕಮಾಂಡೋಗಳು ಹದ್ದಿನ ಕಣ್ಣಿರಿಸಿದ್ದಾರೆ. ಪ್ಯಾರಾ ಮಿಲಿಟರಿ, ಎನ್ಎಸ್ಜಿ ಕಮಾಂಡೋಗಳು, ಡ್ರೋನ್ ಹಾಗೂ ಸ್ನೈಪರ್ಗಳ ಮೂಲಕ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಸುಮಾರು 5ಕ್ಕೂ ಹೆಚ್ಚು ರಾಷ್ಟ್ರಗಳಿಂದ ಗಣ್ಯರು ಆಗಮಿಸುತ್ತಿದ್ದಾರೆ, ಗಣ್ಯರ ಆಗಮನ ಹಿನ್ನೆಲೆ ಹೋಟೆಲ್ಗಳಿಗೂ ಭದ್ರತೆ ಕಲ್ಪಿಸಲಾಗಿದೆ. ದಎಹಲಿಯಲ್ಲಿ ಸುಮಾರು 2,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಧಾನಿ ಮೋದಿ ಇಂಡಿಯಾ ಗೇಟ್ ಬಳಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ, ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನೆರವೇರಲಿದೆ. ಮಾಜಿ ಪ್ರಧಾನಿ ವಾಜಪೇಯಿ ಅವರ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.
ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದೇಶದ ಒಳಗಿನ ಗಣ್ಯರಷ್ಟೇ ಅಲ್ಲ, ವಿದೇಶಿ ಗಣ್ಯರೂ ಆಗಮಿಸುತ್ತಿದ್ದಾರೆ. ಬಾಂಗ್ಲಾದೇಶ, ಮಾಲ್ಡೀವ್ಸ್, ಭೂತಾನ್, ನೇಪಾಳ, ಮಾರಿಷಸ್ನ ನಾಯಕರು ಆಗಮಿಸಲಿದ್ದಾರೆ. 50 ಮಂದಿ ಧಾರ್ಮಿಕ ನಾಯಕರು, ಪ್ರಮುಖ ಲಾಯರ್ಗಳು, ವೈದ್ಯರು, ಕಲಾವಿದರು, ಪ್ರಭಾವಿಗಳು, ಪದ್ಮ ವಿಭೂಷಣ, ಪದ್ಮ ಭೂಷಣ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಆಗಮಿಸಲಿದ್ದಾರೆ.
ದೆಹಲಿಯಲ್ಲಿ ಜೂನ್ 9 ಮತ್ತು 10 ಕ್ಕೆ ಸಿಆರ್ಪಿಸಿಯ ಸೆಕ್ಷನ್ 144 ಜಾರಿಗೊಳಿಸಲು ಆದೇಶ ಹೊರಡಿಸಿದ್ದಾರೆ. ಜೂನ್ 9 ಮತ್ತು 10 ರಂದು ದೆಹಲಿಯನ್ನು ಫ್ಲೈ ಝೋನ್ ಎಂದು ಘೋಷಿಸಲಾಗಿದೆ.