ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬ್ಯಾಂಕ್ ಸಿಬ್ಬಂದಿಗೆ ಎಸ್ಐಟಿ ನೋಟಿಸ್ ನೀಡಿದೆ. ಯೂನಿಯನ್ ಬ್ಯಾಂಕ್ನ ಮೂವರು ಸಿಬ್ಬಂದಿಗೆ ಎಸ್ಐಟಿ ನೋಟಿಸ್ ಕೊಟ್ಟಿದೆ. ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತ ರೌಲ್, ಬ್ಯಾಂಕ್ ಬ್ರಾಂಚ್ ಹೆಡ್ ದೀಪಾ ಎಸ್, ಕೃಷ್ಣಮೂರ್ತಿಗೆ ನೋಟಿಸ್ ನೀಡಲಾಗಿದೆ. ತುರ್ತಾಗಿ ವಿಚಾರಣೆಗೆ ಹಾಜರಾಗಲು ನೋಟಿಸ್ ಕೊಡಲಾಗಿದೆ.
ಸಿಬಿಐ ಬಳಿಕ ಇ.ಡಿ ಈ ಪ್ರಕರಣಕ್ಕೆ ಎಂಟ್ರಿಕೊಟ್ಟಿದ್ದು, ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಮಾಹಿತಿ ಪಡೆದಿದೆ. ಸಿಬಿಐ ಬಳಿ ಇ.ಡಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಹಣ ಅಕ್ರಮ ವರ್ಗಾವಣೆ (ಹವಾಲ) ನಡೆದಿರೋ ಶಂಕೆ ಹಿನ್ನೆಲೆ ಇ.ಡಿ ಮಾಹಿತಿ ಪಡೆದಿದ್ದು, ಸಿಬಿಐ ಬಳಿ ಎಫ್ಐಆರ್ ಬಗೆಗಿನ ಮಾಹಿತಿ ಪಡೆದಿದೆ.
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
ಸಿಬಿಐ ಬಳಿಕ ಇ.ಡಿ ಎಫ್ಐಆರ್ ದಾಖಲಿಸುವ ಸಾಧ್ಯತೆಯಿದ್ದು, ಮುಂದಿನ ವಾರ ಎಫ್ಐಆರ್ ದಾಖಲು ಮಾಡಲು ತಯಾರಿ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದೆ. ಈಗಾಗಲೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.