ದೊಡ್ಮನೆಯ ಡಿವೋರ್ಸ್ ಕೇಸ್ ಬಗ್ಗೆ ಯುವಪರ ಲಾಯರ್ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ.
ಶ್ರೀದೇವಿ ಮೇಲೆ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಶ್ರೀದೇವಿಗೆ ಬೇರೆ ಬಾಯ್ಫ್ರೆಂಡ್ ಇದ್ದಾನೆ ಎಂದು ಯುವ ರಾಜ್ಕುಮಾರ್ ಪರ ಲಾಯರ್ ಹೇಳಿದ್ದಾರೆ. ವಿಚ್ಛೇದನದ ಅರ್ಜಿಯಲ್ಲಿ ಇರುವು ವಿಚಾರಗಳನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ.
ಮೋದಿ ಹೊಸ ಕ್ಯಾಬಿನೆಟ್.. ನೂತನ ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ?.. ಇಲ್ಲಿದೆ ಡೀಟೈಲ್ಸ್..!
ರಾಘವೇಂದ್ರ ರಾಜ್ಕುಮಾರ್ ಅವರ ಪುತ್ರ ಯುವ ರಾಜ್ಕುಮಾರ್ ವಿಚ್ಛೇದನದ (Divorce) ಬಗ್ಗೆ ಮಾಹಿತಿ ನೀಡಲು ಯುವ ಪರ ಲಾಯರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಯುವ ರಾಜ್ಕುಮಾರ್ ಅವರು ಶ್ರೀದೇವಿ ಅವರಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದು ಯಾಕೆ ಎಂಬುದಕ್ಕೆ ಲಾಯರ್ ಕಾರಣ ನೀಡಿದ್ದಾರೆ.
ರಾಘವೇಂದ್ರ ರಾಜ್ಕುಮಾರ್ ಮಗ ಯುವ ರಾಜ್ಕುಮಾರ್ ಇತ್ತೀಚಿಗಷ್ಟೇ ಯುವ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ರು. ಚಿತ್ರರಂಗಕ್ಕೆ ಎಂಟ್ರಿ ಕೊಡುವ ಮುನ್ನವೇ ಯುವ ರಾಜ್ಕುಮಾರ್ , ಶ್ರೀದೇವಿ ಅವರನ್ನು ಮದುವೆ ಆಗಿದ್ದರು. 7 ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ 4 ವರ್ಷಕ್ಕೆ ದೂರ ದೂರವಾಗುವ ನಿರ್ಧಾರ ಮಾಡಿದೆ.
ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಇಬ್ಬರು 6 ತಿಂಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಸದ್ಯ ಶ್ರೀದೇವಿ ಅವರು ಅಮೆರಿಕಾದಲ್ಲಿ ನೆಲೆಸಿದ್ದಾರೆ. ಉನ್ನತ ಶಿಕ್ಷಣಕ್ಕಾಗಿ ಅವರು ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗ್ತಿದೆ.
2019ರಲ್ಲಿ ಪ್ರೀತಿಸಿ ಮದುವೆಯಾಗಿದ್ದ ಯುವರಾಜ್ಕುಮಾರ್ ಇದೀಗ ಡಿವೋರ್ಸ್ಗಾಗಿ ಫ್ಯಾಮೀಲಿ ಕೋರ್ಟ್ನಲ್ಲಿ ಅರ್ಜಿ ಹಾಕಿದ್ದಾರೆ. ಇದು ರಾಜ್ ಫ್ಯಾಮಿಲಿ ಮೊದಲ ಡಿವೋರ್ಸ್ ಕೇಸ್ ಆಗಿದೆ. ಯುವರಾಜ್ಕುಮಾರ್ ಡಿವೋರ್ಸ್ ಸುದ್ದಿ ಕೇಳಿ ಫ್ಯಾನ್ಸ್ ಶಾಕ್ ಆಗಿದ್ದಾರೆ.
ಡಾ ರಾಜ್ಕುಮಾರ್ ಅವರ ಮೊಮ್ಮಗ ಯುವರಾಜ್ಕುಮಾರ್ ಡಿವೋರ್ಸ್ ಅರ್ಜಿ ಸಲ್ಲಿಸಿದ್ದು, ಕಳೆದ 6 ತಿಂಗಳಿನಿಂದ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಶ್ರೀದೇವಿ ಭೈರಪ್ಪ ಅವರು ಮೂಲತಃ ಮೈಸೂರಿನವರಾಗಿದ್ದಾರೆ. ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು. ಇದೇ ಕಾರಣಕ್ಕೆ ಯುವರಾಜ್ಕುಮಾರ್ ಡಿವೋರ್ಸ್ ಪಡೆಯುತ್ತಿದ್ದಾರೆ ಎನ್ನಲಾಗ್ತಿದೆ.
ಅಲ್ಲೇ ಹುಟ್ಟಿ ಬೆಳೆದು ಉನ್ನತ ಶಿಕ್ಷಣ ಮುಗಿಸಿ, ಡಾ. ರಾಜ್ ಕುಮಾರ್ ಅವರ ಕುಟುಂಬ ನಡೆಸುತ್ತಿರುವ ಸಿವಿಲ್ ಸರ್ವೀಸ್ ಅಕಾಡೆಮಿ ಉಸ್ತುವಾರಿ ವಹಿಸಿಕೊಂಡಿದ್ದರು .ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು.
ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಲಾಗಿದೆ. ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ. ಡಿವೋರ್ಸ್ ಅರ್ಜಿಗೆ ಶ್ರೀದೇವಿ ಉತ್ತರ ನೀಡಬೇಕಿದೆ..
ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು ಎಂದು ವರದಿಯಾಗಿದೆ.