ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಮಾಡಿರುವ ಆರೋಪದಲ್ಲಿ ನಟ ದರ್ಶನ್ ಸೇರಿ 10 ಕ್ಕೂ ಹೆಚ್ಚು ಮಂದಿಯ ಬಂಧನವಾಗಿದೆ. ಇದೀಗ ಪವಿತ್ರ ಗೌಡ ಅವರನ್ನೂ ವಶಕ್ಕೆ ಪಡೆದ ಪೊಲೀಸರು ಬಂಧಿಸಿದ್ದಾರೆ. ಕೊಲೆಯಲ್ಲಿ ಒಳಸಂಚು ಹಿನ್ನೆಲೆಯಲ್ಲಿ ಆರ್ ಆರ್ ನಗರದ ಮನೆಯಿಂದ ಕರೆ ತಂದು ಬಂಧಿಸಲಾಗಿದೆ. ಅನ್ನಪೋರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದ್ದು, ಸುತ್ತ ಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದನಂತೆ. ಕೆಟ್ಟ ಫೋಟೊ ಕಳಿಸುತ್ತಿದ್ದನಂತೆ ಹೀಗಾಗಿ ರೇಣುಕಾಸ್ವಾಮಿಯನ್ನ ಒಂದು ವಾರದಿಂದ ಟ್ರಾಕ್ ಮಾಡಿ ಬೆಂಗಳೂರಿಗೆ ಕರೆತಂದು ದರ್ಶನ್ ಆಪ್ತ ವಿನಯ್ ಕಾರ್ ಶೆಡ್ ಒಂದರಲ್ಲಿ ಇಟ್ಟು ಹಲ್ಲೆ ಮಾಡಿದ್ದರು. ಮರ್ಮಾಂಗಕ್ಕೆ ಬಲವಾಗಿ ಒದ್ದ ಕಾರಣಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದ. ಬಳಿಕ ಆತನ ಮೃತ ದೇಹವನ್ನು ಸುಮನಹಳ್ಳಿ ಬ್ರಿಡ್ಜ್ ಬಳಿಯ ಸತ್ವ ಅನುಗ್ರಹ ಅಪಾರ್ಟ್ಮೆಂಟ್ ಸಮೀಪ ಬಿಸಾಕಿ ಹೋಗಿದ್ದರು.
Ginger Side Effects: ಅತಿಯಾದ ಶುಂಠಿ ಸೇವನೆಯಿಂದ ಏನೆಲ್ಲಾ ಅಡ್ಡ ಪರಿಣಾಮಗಳಾಗುತ್ತೆ ಗೊತ್ತಾ..?
ರೇಣುಕಾಸ್ವಾಮಿಯನ್ನ ಚಿತ್ರದುರ್ಗ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದ ಬಳಿಕ ಆರ್ ಆರ್ ನಗರದಲ್ಲಿರುವ ದರ್ಶನ್ ಬಲಗೈ ಬಂಟ ವಿನಯ್ ಗೆ ಸೇರಿದ ವಾಹನ ಸೀಜರ್ ಮಾಡಿ ಇಡುವ ಶೆಡ್ ನಲ್ಲಿ ಇಟ್ಟು ರೇಣುಕಾಸ್ವಾಮಿಯನ್ನ ಹೊಡೆದು. ಹಲ್ಲೆ ಮಾಡಿದ್ದಾರೆ.
ರೇಣುಕಾಸ್ವಾಮಿಯ ಮರ್ಮಾಂಗವನ್ನು ಒದ್ದಿದ್ದಕ್ಕೆ ಗಂಭೀರ ನೋವಿನಿಂದ ನರಳಿದ ರೇಣುಕಾಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದ.ಅದಾದ ನಂತರ ಶನಿವಾರ ನಡುರಾತ್ರಿ ಸುಮನಹಳ್ಳಿ ಮೋರಿಯಲ್ಲಿ ರೇಣುಕಾಸ್ವಾಮಿ ಮೃತದೇಹವನ್ನು ಎಸೆದು ಹೋಗಲಾಗಿದೆ. ದರ್ಶನ್ ರೇಣುಕಾಸ್ವಾಮಿ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.