ಬೆಂಗಳೂರು :- ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮುಖದಲ್ಲಿ ಚಿಂತೆಯ ಕಾರ್ಮೋಡ ಆವರಿಸಿದೆ.
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 13 ಮಂದಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಆಪ್ತೆ ಎನಿಸಿಕೊಂಡಿರುವ ಪವಿತ್ರಾ ಗೌಡ ಕೂಡ ಈ ಪ್ರಕಣದಲ್ಲಿ ಎ1 ಅಪರಾಧಿ ಎನಿಸಿಕೊಂಡಿದ್ದು, ದರ್ಶನ್ ಎ2 ಅಪರಾಧಿ ಆಗಿದ್ದಾರೆ. ಸದ್ಯ ಕೊಲೆ ವಿಚಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜೈಲಿನಲ್ಲೂ ನಟ ದರ್ಶನ್ ಗೆ ಭರ್ಜರಿ ಭೋಜನ: ದೊನ್ನೆ ಬಿರಿಯಾನಿ ತರಿಸಿ ಕೊಟ್ಟ ಪೊಲೀಸರು
ಜೈಲ್ ಸೆಲ್ನಲ್ಲಿರೋ ಅವರು ರಾತ್ರಿಯೆಲ್ಲ ನಿದ್ದೆ ಮಾಡಿಲ್ಲ. ರಾತ್ರಿ ದರ್ಶನ್ ಅವರಿಗೆ ಹೋಟೆಲ್ನಿಂದ ದೊನ್ನೆ ಬಿರಿಯಾನಿ ತರಿಸಲಾಗಿದೆ. ಅದನ್ನು ಎಲ್ಲರೂ ತಿಂದಿದ್ದಾರೆ. ಇತ್ತ ದರ್ಶನ್ಗೆ ರಾತ್ರಿಯೆಲ್ಲ ನಿದ್ದೆ ಬಂದಿಲ್ಲ. ರಾತ್ರಿ ವೇಳೆ ಲಾಕಪ್ನಲ್ಲಿ ಎಚ್ಚರಗೊಂಡು ಕುಳಿತಿದ್ದಾರೆ. ಬಂಧನದ ಬಳಿಕ ಅವರು ಚಿಂತಾಕ್ರಾಂತರಾಗಿದ್ದಾರೆ. ಭದ್ರತೆ ದೃಷ್ಟಿಯಿಂದ ಅನ್ನಪೂರ್ಣೇಶ್ವರಿ ನಗರ ಠಾಣೆ ಬಳಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಕ್ಷುಲ್ಲಕ ಕಾರಣಕ್ಕಾಗಿ ರೇಣುಕಾ ಸ್ವಾಮಿ ಎಂಬುವವರನ್ನು ಹತ್ಯೆ ಮಾಡಲಾಗಿದೆ.