ಚಿತ್ರದುರ್ಗ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದಕ್ಕಾಗಿ ಕೊಲೆಯಾಗಿರುವ ರೇಣುಕಾ ಸ್ವಾಮಿ ಪರವಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ನಗರದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಪ್ರತಿಭಟನೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾಚಾರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
https://ainlivenews.com/do-you-snore-constantly-so-this-is-the-reason/
ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘಟನೆ, ಲಿಂಗಾಯತ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು. ಚಿತ್ರದುರ್ಗದ ಮೃತ ರೇಣುಕಾ ಸ್ವಾಮಿ ಅವರನ್ನ ಕ್ರೂರಿಯಾಗಿ ಹಿಂಸಿಸಿ ಕೊಲೆ ಮಾಡಿರುವುದು ಅತ್ಯಂತ ಅಮಾನವ ಘಟನೆಯಾಗಿದೆ. ಕೂಡಲೇ ಆರೋಪಿಗಳ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.