ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಜಾಗ ಆರ್ಆರ್ ನಗರ ಸೇರಿದಂತೆ ಸುತ್ತಮುತ್ತಲಿನ ಏರಿಯಾಗಳಲ್ಲಿ ಇದೊಂದು ಸೆಟಲ್ಮೆಂಟ್ ಅಡ್ಡೆಯಾಗಿತ್ತು ಎನ್ನಲಾಗುತ್ತಿದೆ.
ಪ್ರೈವೇಟ್ ಫೈನಾನ್ಸ್ಗಳಿಗೆ ಇಎಂಐ ಪೇ ಮಾಡದ ವಾಹನಗಳನ್ನು ಸೀಜ್ ಮಾಡಿ ತಂದು ನಿಲ್ಲಿಸುವ ವೆಹಿಕಲ್ ಶೆಡ್ ಇದಾಗಿದ್ದು, ಬೆದರಿಕೆ ಒಡ್ಡಲು, ವ್ಯಕ್ತಿಗಳನ್ನು ಕರೆತಂದು ಹಲ್ಲೆ ನಡೆಸಲು ಇದೇ ಶೆಡ್ನಲ್ಲಿ ಕೂಡಿ ಹಾಕುತ್ತಿದ್ದರು ಎನ್ನಲಾಗುತ್ತಿದೆ. ಫೈನಾನ್ಸ್ ವ್ಯವಹಾರದಲ್ಲಿ ಹಣ ಪಡೆದು ಕೊಡದೆ ಇದ್ದವರನ್ನು ಇಲ್ಲಿಗೆ ಕರೆತಂದು ಬೆದರಿಸುವ ಜಾಗವಾಗಿತ್ತು. ಹಲ್ಲೆ ನಡೆಸಲು ಅವಶ್ಯಕವಾದ ಬ್ಯಾಟ್, ಸ್ಟಿಕ್, ರಾಡ್, ದೊಣ್ಣೆ ಇನ್ನಿತರ ಮಾರಕಾಸ್ತ್ರಗಳನ್ನು ಖಾಯಂ ಆಗಿಯೇ ಇಲ್ಲಿಯೇ ಇಟ್ಟಿರುತ್ತಾರೆ.
ಸಂಜೆಯಾಗುತ್ತಿದ್ದಂತೆ ನಿಶ್ಯಬ್ದವಾಗಿ ವಿರಳ ಜನಸಂಖ್ಯೆಯಿಂದ ಕೂಡಿರುವ ಈ ಪ್ರದೇಶದಲ್ಲಿ ವ್ಯಕ್ತಿಗಳನ್ನು ಕರೆದುಕೊಂಡು ಬಂದು ಬೆದರಿಕೆ ಹಾಕಿ, ಹಲ್ಲೆ ನಡೆಸುವ ಕ್ರಿಮಿನಲ್ ಚಟುವಟಿಕೆಗಳು ಈ ಶೆಡ್ನಲ್ಲಿ ನಡೆಯುತ್ತಿರುವ ಕುರಿತು ಕೇಳಿಬಂದಿದೆ. ಇನ್ನು ಚಿತ್ರದುರ್ಗದ ನಿವಾಸಿ ಆಗಿದ್ದ ರೇಣುಕಾ ಸ್ವಾಮಿಯನ್ನು ಅಪಹರಣ ಮಾಡಿ, ಬೆಂಗಳೂರಿನ ಹೊರವಲಯದ ಶೆಡ್ಗೆ ತಂದು ಅಲ್ಲಿ ಆತನ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.