ವಿಜಯಪುರ:– ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ವರ್ಗಾವಣೆ ವಿಚಾರವಾಗಿ ಆಲಮೇಲ ಪೊಲೀಸ್ ಠಾಣೆಯ ಮುಖ್ಯ ಪೇದೆ ಪ್ರತಿಭಟನೆ ನಡೆಸಿರೋ ಘಟನೆ ನಡೆದಿದೆ.
Siddaramaiah: ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ.. ಸಿದ್ದರಾಮಯ್ಯ..!
ಶಂಕ್ರಪ್ಪ ಎಸ್ ದೇಸಾಯಿ ಮುಖ್ಯ ಪೇದೆ ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ನಗರದ ಐ ಆರ್ ಬಿ ಯಲ್ಲಿ ಶಂಕ್ರಪ್ಪ ದೇಸಾಯಿ ಪತ್ನಿ ಪುಷ್ಪಾ ಪೊಲೀಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾನು ಆಲಮೇಲ ಪೊಲೀಸ್ ಠಾಣೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು.
ವಿಜಯಪುರಕ್ಕೆ ವರ್ಗಾವಣೆಗಾಗಿ ಮನವಿ ಕೊಟ್ಟಿದ್ದರೂ ವರ್ಗಾವಣೆ ಮಾಡಿಲ್ಲ. ಹೀಗಾಗಿ ನನಗೆ ಅನ್ಯಾಯ ಆಗಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಆರೋಪಿಸಿ ನ್ಯಾಯಕ್ಕಾಗಿ ಪ್ರತಿಭಟಿಸಿದರು.
ಕಳೆದ ನಾಲ್ಕು ವರ್ಷದಿಂದ ಆಲಮೇಲ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆ ಸೇವೆ ಸಲ್ಲಿಸುತ್ತಿದ್ದು, ಆದ್ರೆ ವರ್ಗಾವಣೆ ಮಾಡುವಲ್ಲಿ ಅನ್ಯಾಯ ಆಗಿದೆ. ವರ್ಗಾವಣೆ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಅಂತ ಆರೋಪಿಸಿದ್ದಾರೆ. ನನಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡ್ತೀನಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂದಿದ್ದಾರೆ…