ಮೈಸೂರು:– ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗ್ಗೆಯಿಂದ ಟಿವಿಯವರು ಕ್ಯಾಮರಾ ಹಾಕೊಂಡು ಕುಳಿತಿರ್ತಿರಾ!?.. ದರ್ಶನ್ ಅರೆಸ್ಟ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ!
ನಟ ದರ್ಶನ್ ವಿಚಾರದಲ್ಲಿ ನನ್ನ ಹತ್ತಿರ ಯಾರೂ ಬಂದಿಲ್ಲ. ಬಿಜೆಪಿಗರು ಸುಮ್ಮನೇ ಹೇಳುತ್ತಾರೆ. ನಾವು ಕಾನೂನು ಪ್ರಕಾರ ಕೆಲಸ ಮಾಡುತ್ತೇವೆ. ಕಾನೂನು ಬಿಟ್ಟು ನಾವು ಏನೂ ಮಾಡುವುದಿಲ್ಲ ಎಂದಿದ್ದಾರೆ. ಇನ್ನು ಪೊಲೀಸರು ಯಾವ ಕಾರಣಕ್ಕೆ ಶಾಮಿಯಾನ ಹಾಕಿದ್ದಾರೆ ಗೊತ್ತಿಲ್ಲ. ಸಾಮಾನ್ಯ ಜನರಿಗೆ ತೊಂದರೆ ಆದ ಬಗ್ಗೆ ಯಾರೂ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಅನ್ನಪೂರ್ಣೇಶ್ವರಿನಗರ ಠಾಣೆಗೆ ಹಾಕಿರುವ ಶಾಮಿಯಾನ ತೆರವಿಗೆ ವಂದೇಮಾತರಂ ಸಂಘಟನೆ ರಾಜ್ಯಾಧ್ಯಕ್ಷ ಶಿವಕುಮಾರ ನಾಯಕ್ ಮನವಿ ಮಾಡಿದ್ದಾರೆ. ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವುದು ನಗೆಪಾಟಲಿಗೀಡಾಗಿದೆ.