ಬೆಂಗಳೂರು:- ಕರ್ನಾಟಕದ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಲೆ ಕೇಸ್ ನಲ್ಲಿ ದರ್ಶನ್ ಅರೆಸ್ಟ್ ಪ್ರಕರಣ.. ಸಿಎಂ ಸಿದ್ದರಾಮಯ್ಯ ಹೇಳಿದಿಷ್ಟು..!
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ° C ಮತ್ತು 21 ° C ಆಗಿರುವ ಸಾಧ್ಯತೆ ಇದೆ
ಪೂರ್ವ ಮುಂಗಾರಿನಂತೆ ಮುಂಗಾರು ಕೂಡ ರಾಜ್ಯದಲ್ಲಿ ಸದ್ಯ ವಾಡಿಕೆಗಿಂತ ಹೆಚ್ಚಳವಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮುಂಗಾರು ಮಳೆ (Monsoon Rains) ಚುರುಕು ಪಡೆಯುತ್ತಿದೆ. ಜೂನ್ ಆರಂಭದಲ್ಲೇ ವಾಡಿಕೆಗಿಂತ ಹೆಚ್ಚಿನ ಮುಂಗಾರು ಮಳೆ ಆಗಿದ್ದು, ಕಳೆದ ಬಾರಿಗಿಂತ ರಾಜ್ಯದಲ್ಲಿ 62% ನಷ್ಟು ವಾಡಿಕೆಯ ಮುಂಗಾರು ಮಳೆ ಹೆಚ್ಚಿದೆ.
ಕರಾವಳಿ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆ ಈ ಬಾರಿ ಸುರಿದಿದೆ. ಜೂನ್ 1 ರಿಂದ 13ರವರೆಗೆ ರಾಜ್ಯದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಸುರಿದಿದೆ
ಜೂನ್ ಮೊದಲ ಎರಡು ವಾರದಲ್ಲೇ ರಾಜ್ಯದಲ್ಲಿ ದಾಖಲೆಯ 113 mm ನಷ್ಟು ಮಳೆಯಾಗಿದ್ದು, ಕಳೆದ ವರ್ಷ ಈ ಅವಧಿಯಲ್ಲಿ 70 mm ನಷ್ಟು ಮಳೆಯಾಗಿತ್ತು. ಕಳೆದ ಬಾರಿಗಿಂತ 62% ನಷ್ಟು ಮುಂಗಾರು ಮಳೆ ಏರಿಕೆ ಕಂಡಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 17ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಕೋಲಾರ, ತುಮಕೂರು, ವಿಜಯಪುರಕ್ಕೂ ಮಳೆ ಮುನ್ಸೂಚನೆ ನೀಡಲಾಗಿದೆ.