ಚಿತ್ರದುರ್ಗ: ದರ್ಶನ್ ಗ್ಯಾಂಗ್ನಿಂದ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ನಿವಾಸಕ್ಕಿಂದು ಫಿಲ್ಮ್ ಚೆಂಬರ್ ತಂಡ ಭೇಟಿ ನೀಡಿತ್ತು. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಧೈರ್ಯತುಂಬಿ, ವಾಣಿಜ್ಯ ಮಂಡಳಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಯಿತು. ಮುಂದೆ ಕುಟುಂಬಕ್ಕೆ ಯಾವ ರೀತಿ ಸಹಾಯ ಮಾಡಬೇಕು ಅನ್ನೋದನ್ನ ನೋಡಿಕೊಂಡು ಶಾಶ್ವತ ಪರಿಹಾರ ಕೊಡಿಸುವ ಭರವಸೆಯನ್ನೂ ಚೇಂಬರ್ ಅಧ್ಯಕ್ಷರು ನೀಡಿದರು.
6 ತಿಂಗಳಲ್ಲಿ ನಿಮ್ಮ ಆದಾಯವನ್ನು ಹೆಚ್ಚಿಸುವ ಬೆಳ್ಳುಳ್ಳಿ ಬಗ್ಗೆ ಇಲ್ಲಿದೆ ಮಾಹಿತಿ.!
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾಳೆ. ದರ್ಶನ್ ಎ2 ಹಾಗೂ ಕೆ.ಪವನ್ ಎ3 ಆಗಿದ್ದಾನೆ. ರಾಘವೇಂದ್ರ ಎ4, ನಂದೀಶ್ ಎ5, ಜಗದೀಶ್ ಅಲಿಯಾಸ್ ಜಗ್ಗ ಎ6, ಅನು ಎ7, ರವಿ ಎ8, ರಾಜು ಎ9, ವಿನಯ್ ಎ10, ನಾಗರಾಜ್ ಎ11, ಲಕ್ಷ್ಮಣ್ ಎ12, ದೀಪಕ್ ಎ13, ಪ್ರದೋಶ್ ಎ14, ಕಾರ್ತಿಕ್ ಎ15, ಕೇಶವ ಮೂರ್ತಿ ಎ16, ನಿಖಿಲ್ ನಾಯಕ್ ಎ17 ಎಂದು ಕೇಸ್ ದಾಖಲಾಗಿದೆ. 13 ಮಂದಿ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.