ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಮಾಡಿ ಶನಿವಾರ ಸಿದ್ದು ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಮಾಡಿ ಶನಿವಾರ ಸಿದ್ದು ಸರ್ಕಾರ ಆದೇಶ ಹೊರಡಿಸಿದೆ.
ತೆರಿಗೆ ಹೆಚ್ವಳದ ನಂತರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ, ಡೀಸೆಲ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಹಲವು ಉಚಿತ ಯೋಜನೆಗಳನ್ನ ನೀಡಿ ಇಂದು ಪೆಟ್ರೋಲ್ ಬೆಲೆ ಏರಿಕೆ ಮಾಡಿ ಜನರಿಗೆ ಟೋಪಿ ಹಾಕಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಪರಿಷತ್ ಸದಸ್ಯ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಡಿಸೀಲ್ ಮೇಲೆ ಸೆಸ್ ವಿಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಜನ ವಿರೋಧಿ, ಬಡವರ ವಿರೋಧಿ ಸರ್ಕಾರ ಎಂದು ಸಾಬೀತು ಮಾಡಿದೆ. ಉಚಿತ ಉಚಿತ ಉಚಿತ ಎಂದು ರಾಜ್ಯದ ಜನರ ಮುಂಗೈಗೆ ತುಪ್ಪ ಹಚ್ಚುತ್ತಾ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಒಂದು ವರ್ಷದ ಅಧಿಕಾರಾವಧಿಯಲ್ಲಿ ಎರಡಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಮೇಲಿನ ಸೆಸ್ ಜಾಸ್ತಿ ಮಾಡಿದೆ ಎಂದು ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಪೆಟ್ರೋಲ್ ಬೆಲೆ ಸರಾಸರಿ ಮೂರೂ ರೂಪಾಯಿ ಹಾಗು ಡಿಸೇಲ್ ಬೆಲೆ ಸರಾಸರಿ ಮೂರುವರೆ ರೂಪಾಯಿಯಷ್ಟು ಜಾಸ್ತಿ ಮಾಡಿದೆ. ನಾನು ಬಡವರ ಪರ ಎಂದು ಬೊಬ್ಬೆ ಹೊಡೆಯುವ ಮುಖ್ಯಮಂತ್ರಿಯವರೇ ಇದೆ ಏನು ನಿಮ್ಮ ಬಡವರ ಪರ ನೀತಿ??? ನಾಚಿಕೆಯಾಗಬೇಕು, ನಿಮ್ಮ ಜನ ವಿರೋಧಿ ಸರ್ಕಾರಕ್ಕೆ, ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಎಂದು ವಾಗ್ದಾಳಿ ನಡೆಸಿದ್ದಾರೆ
ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ. ನೀವು ಯಾವ ಭಾಗ್ಯವನ್ನೂ ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ