ಬೆಂಗಳೂರು:- ಪೆಟ್ರೋಲ್ ದರ ಏರಿಕೆ ಆದೇಶವನ್ನ ವಾಪಸ್ ಪಡೆಯದಿದ್ರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.
World Cup 2024: ಜೋರು ಮಳೆಯಿಂದಾಗಿ ಇಂದಿನ ಭಾರತ- ಕೆನಡಾ ಪಂದ್ಯ ರದ್ದು..!
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹತಾಶವಾಗಿದೆ, ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬಾರದ ಹಿನ್ನಲೆಯಲ್ಲಿ ಆ ಸಿಟ್ಟನ್ನು ಸಾಮಾನ್ಯ ಜನರ ಮೇಲೆ ಏರುವ ಮೂಲಕ ತೀರಿಸಿಕೊಳ್ಳುತ್ತಿದೆ. ಈ ಹಿಂದೆ ವಿದ್ಯುತ್ ದರ, ಸ್ಟ್ಯಾಂಪ್ ಡ್ಯೂಟಿ ದರ ಹೆಚ್ಚಿಸಿತ್ತು. ಇಂದು ಪೆಟ್ರೋಲ್ ಹಾಗೂ ಡೀಸಲ್ ಮೇಲಿನ ತೆರಿಗೆಯನ್ನ ಹೆಚ್ಚಳ ಮಾಡಿದೆ. ಇದರಿಂದ ಪೆಟ್ರೋಲ್ ಬೆಲೆಯಲ್ಲಿ 3, ಡೀಸೆಲ್ ಬೆಲೆಯಲ್ಲಿ 3.5 ರೂ ಹೆಚ್ಚಳ ಮಾಡಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಕಿಡಿ ಕಾರಿದ್ದಾರೆ.
ರಾಜ್ಯ ಸರ್ಕಾರ ತಮ್ಮ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ದಿವಾಳಿಯಾಗಿದೆ. ನೌಕರರಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇದೇ ಕಾರಣದಿಂದ ಸರ್ಕಾರದ ಖಜಾನೆ ತುಂಬಿಸಲು
ತೆರಿಗೆ ಹೆಚ್ಚಳ ಮಾಡುತ್ತಿದೆ, ಆದರೆ ಸಿಎಂ ಈ ವೈಫಲ್ಯವನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಮೊದಲು ಅವರು ಈ ಭಂಡತನವನ್ನು ಬಿಡಬೇಕು ಎಂದರು.
ವಾಲ್ಮೀಕಿ ನಿಗಮ ಹಗರಣ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು ಎಂದು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ವಾಲ್ಮೀಕಿ ಸಮುದಾಯದ ನಾಯಕರು ನಮ್ಮೊಂದಿಗೆ ಚರ್ಚೆ ಮಾಡಿದ್ದಾರೆ. ಏಕೆಂದರೆ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಇಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನ ಇಲ್ಲಿಗೆ ಕೈ ಬಿಡುವ ಪ್ರಶ್ನೆ ಇಲ್ಲ ಎಂದರು.