ಬೆಂಗಳೂರು:- ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ.
ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯಿಂದ ಟ್ರಾನ್ಸ್ಪೋರ್ಟ್ಗೆ ಹೊಡೆತ ಬೀಳುತ್ತೆ. ಬಡವರು, ರೈತರಿಗೆ ತೊಂದರೆ ಆಗುತ್ತದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟು ಹಣ ದೋಚಿದ್ದಾರೋ? ಎಷ್ಟು ದಿನ ಈ ಆಟ ಆಡುತ್ತಾರೋ. ಈ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ. ರೈತರಿಗೆ ತೊಂದರೆ ಆಗುತ್ತೆ. ಬಡವರ ಕಿಸೆಗೆ ಕೈ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಮದ್ಯದ ದರ ಏರಿಕೆ ಮಾಡಿದ್ದಾಯ್ತು, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಾಳ ಮಾಡಿದ್ದಾಯ್ತು, 5 ಗ್ಯಾರಂಟಿ ಯೋಜನೆಗಾಗಿ ತೈಲ ದರ ಹೆಚ್ಚಳ ಮಾಡಿದ್ದಾರೆ ಎಂದರು.