ವಿಜಯಪುರ: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಏರಿಕೆ ವಿಚಾರವಾಗಿ ಸಚಿವ MB ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಉಳಿದ ರಾಜ್ಯಗಳಿಗಿಂತ ಪೆಟ್ರೋಲ್ ಮತ್ತು ಡೀಸೆಲ್ ದರ ಕರ್ನಾಟಕದಲ್ಲಿ ಕಡಿಮೆಯೇ ಇದೆ.
ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ 5 ರಿಂದ 10 ರೂಪಾಯಿ ಹೆಚ್ಚಿಗೆ ಮಾಡಲಾಗಿದೆ. ನಾವು ಬೇರೆ ರಾಜ್ಯಗಳಿಗಿಂತ ಪೆಟ್ರೋಲ್-ಡೀಸೆಲ್ ದರವನ್ನ ಕಡಿಮೆ ಏರಿಕೆ ಮಾಡಿದ್ದೇವೆ. ರಾಜ್ಯದಲ್ಲಿ ಆದಾಯ ಕಡಿಮೆಯಾಗುತ್ತಿದೆ, ಅಭಿವೃದ್ಧಿಗೆ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಹಣ ಬೇಕಲ್ವಾ ಎಂದು ಹೇಳಿ ಬೆಲೆ ಏರಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ