ಹುಬ್ಬಳ್ಳಿ: ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಧ್ವೇಷದ ರಾಜಕಾರಣ ರಾಜ್ಯ ಸರ್ಕಾರ ಮಾಡತಾ ಇದೆ ಎಂದು ಕೇಂದ್ರ ಸಚಿವಪ್ರಲ್ಹಾದ್ ಜೋಶಿ ಆರೋಪ ಮಾಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ರಾಜ್ಯ ಸರ್ಕಾರಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಘೋಷಣೆ ಮಾಡಲಾಗಿತ್ತುಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಲಾಗಿದೆ ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಖಜಾನೆಯಿಂದ ದುಡ್ಡು ಖರ್ಚು ಮಾಡಲಾಗ್ತಿದೆ. ದಿನನಿತ್ಯಡ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ ಗ್ಯಾರೆಂಟಿಯಿಂದ ಉಚಿತ ಕೊಡ್ತೇವೆ ಅಂತಾ ದರ ಏರಿಕೆ ಮಾಡಿ ಜನಸಾಮಾನ್ಯರ ಜೇಬಿಗೆ ಹೊರೆ ಆಗಿದೆ.
ಜಾಗತಿಕ ಯುದ್ಧ, ತೀವ್ರ ಬರಗಾಲದಿಂದ ಸಂಕಷ್ಟ ಎದರುಸುತಿದ್ದಾರೆ. ಅನೇಕ ಕಡೆ ಬೆಳೆಗಳು ಸರಿಯಾಗಿ ಬಂದಿಲ್ಲ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬೆಲೆ ನಿಯಂತ್ರಣಕ್ಕೆ ಮುಂದಾಯಿತುಸರಿಯಾದ ರೀತಿಯಲ್ಲಿ ಪೂರೈಕೆ ಇರದ ಕಾರಣ ಆಹಾರ ಧಾನ್ಯ ಸಿಗಲಿಲ್ಲ ಈಗಲೂ ಸಿಗತಾ ಇಲ್ಲ, ನೈಸರ್ಗಿಕವಾಗಿ ಅದು ಆಗಿದ್ದು, ಇನ್ನು ಮಾನವ ನಿರ್ಮಿತವಾದ ಪೆಟ್ರೋಲ್ ಡಿಸೈಲ್ ಬೆಲೆ ಜಾಸ್ತಿ ಮಾಡತಾ ಇದ್ದಾರೆ. ಹಾಗಾದಾರೇ ಏನು ಗ್ಯಾರಂಟಿ ಕೊಟ್ಟಿರಿಈಗ ಪೆಟ್ರೋಲ್ ಮೂರುವರೆ ರೂಪಾಯಿ ಜಾಸ್ತಿ ಮಾಡಿದಿರಿ,
ನಿಮಗೆ ಮೃದುವಾದ ಚಪಾತಿ ಬೇಕೇ? ಈ ಟಿಪ್ಸ್ ಫಾಲೋ ಮಾಡಿ – ಬೆಣ್ಣೆಯಂತ ಚಪಾತಿ ರೆಡಿ.!
ಇದರಿಂದ ಬಸ್ ದರ, ಹಾಲಿನ ದರ, ಅಕ್ಕಿ, ಎಲ್ಲವೋ ಹೆಚ್ಚಾಗುತ್ತದೆ. ಸರ್ಕಾರದ ಬಡ ವಿರೋಧ ನೀತಿ ವಿರೋಧಿಸುತ್ತೇನೆ ಇನ್ನೊಂದು ಸಂಗತಿ ಎಂದರೆ ಗ್ಯಾರಂಟಿ ಗ್ಯಾರಂಟಿ ಎಂದರು ಜನರು ತಿರಸ್ಕಾರ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ ಈಗದ್ವೇಷ ಸಾಧಿಸುವುದಿಂದಲೇ ಈ ರೀತಿ ಬೆಲೆ ಏರಿಕೆ ಮಾಡಿದ್ದಾರೆ. ಜನಸಾಮಾನ್ಯರ ಮೇಲೆ ಹಗೆ ತೀರಿಸಿಕೊಳ್ಳಲು ಇದಾಗಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿದುಕೊಂಡಿದ್ದಾರೆ. ರಾಜ್ಯ ಸರ್ಕಾರದ ಹಿಂದೆ ಬೆಲೆ ಏರಿಕೆ ವಿರುದ್ಧ ಶವ ಯಾತ್ರೆ ಮಾಡಿದ್ದರು. ನಾವು ಕಾಂಗ್ರೆಸ್ ಸರಕಾರದ ವಿರುದ್ಧ ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.